ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚುಂಚನಗಿರಿಗೆ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಮಂಡ್ಯ ಜಿಲ್ಲೆ ,ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಆಗಮಿಸಿದ ಕೇಂದ್ರ ಸಚಿವ ಹೆಚ್ಡಿಕೆಗೆ ಶ್ರೀಮಠದಿಂದ ಪೂರ್ಣ ಕುಂಭ ಸ್ವಾಗತ ಕೋರಲಾಯಿತು .
ಕಾಲಭೈರವೇಶ್ವರನ ದರ್ಶನ ಪಡೆದು ಎಚ್ಡಿಕೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ, ನಂತರ ದರ್ಶನ ಬಳಿಕ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಎಚ್ಡಿಕೆ ಜೊತೆ ಮಾಜಿ ಸಚಿವ ಸಿ ಎಸ್ ಪುಟ್ಟರಾಜು ,ಮಾಜಿ ಶಾಸಕ ಸುರೇಶ್ ಗೌಡ ಮತ್ತಿತರರು ಸಾಥ್ ನೀಡಿದ್ದಾರೆ.