Friday, April 11, 2025
Google search engine

Homeರಾಜ್ಯಸುದ್ದಿಜಾಲಮಂಡ್ಯ: ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡದ್ದಕ್ಕೆ ಕೈ ಮುಖಂಡನ ಬೀದಿ ರಂಪಾಟ

ಮಂಡ್ಯ: ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡದ್ದಕ್ಕೆ ಕೈ ಮುಖಂಡನ ಬೀದಿ ರಂಪಾಟ

ಮಂಡ್ಯ: ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಅವರು ಕೆಆರ್ ಪೇಟೆ ಪುರಸಭೆಗೆ 4 ಬಾರಿ ಆಯ್ಕೆ ಆಗಿದ್ದಾರೆ. ಈ ಬಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಸ್ಥಾಯಿ ಸಮಿತಿ ನೀಡುವುದಾಗಿ ಭರವಸೆ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲಾಧ್ಯಕ್ಷರು ಭರವಸೆ ನೀಡಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ ಇದೀಗ ಸ್ಥಾಯಿ ಸಮಿತಿ ಕೈ ತಪ್ಪುವ ವಿಚಾರ ತಿಳಿದು ಮಂಜುನಾಥ್ ಕೆಂಡಾ ಮಂಡಲವಾಗಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಂದ್ರ ಕುಮಾರ್, ಜಿಲ್ಲಾ ಅಧ್ಯಕ್ಷ ಸಿಡಿ ಗಂಗಾಧರ್, ಮಾಜಿ ಶಾಸಕ ಕೆಬಿ ಚಂದ್ರಶೇಖರ್ ವಿರುದ್ಧ ಅವಾಚ್ಯ ಶಬ್ದಗಳಿಂದ ಅವರು ನಿಂದನೆ ಮಾಡಿದ್ದಾರೆ.

ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಮಾತು ಕೇಳಿಕೊಂಡು ಕಾಂಗ್ರೆಸ್ ಪಕ್ಷ ಹಾಳು ಮಾಡ್ತಿದ್ದೀರಿ. ಜೆಡಿಎಸ್ ಪಕ್ಷದ ಜೊತೆ ಶಾಮಿಲ್ ಆಗಿದ್ದೀರಾ? ಸ್ಥಾಯಿ ಸಮಿತಿ ಕೊಡುತ್ತೇವೆ ಎಂದು ಅನ್ಯಾಯ ಮಾಡಿದ್ದಾರೆ, ಇವರ ಮನೆ ಹಾಳಾಗ ಎಂದೆಲ್ಲ ಮಂಜುನಾಥ್ ಕಿಡಿ ಕಾರಿದ್ದಾರೆ.

RELATED ARTICLES
- Advertisment -
Google search engine

Most Popular