Saturday, April 19, 2025
Google search engine

Homeರಾಜ್ಯಮಂಡ್ಯ: ರಾತ್ರೋರಾತ್ರಿ ಪೆಟ್ರೋಲ್ ಬಂಕ್ ಧ್ವಂಸ ಮಾಡಿದ ದುಷ್ಕರ್ಮಿಗಳು.!

ಮಂಡ್ಯ: ರಾತ್ರೋರಾತ್ರಿ ಪೆಟ್ರೋಲ್ ಬಂಕ್ ಧ್ವಂಸ ಮಾಡಿದ ದುಷ್ಕರ್ಮಿಗಳು.!

ಮಂಡ್ಯ: ರಾತ್ರೋರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಂಕ್’ ಧ್ವಂಸ ಮಾಡಿ, ಪೆಟ್ರೋಲ್ ಹಾಗೂ ಡಿಸೇಲ್ ಪಂಪ್ ನಿಂದ ಹೊರಗೆ ಹರಿಬಿಟ್ಟಿರುವ ಘಟನೆ ಪಾಂಡವಪುರ ತಾಲ್ಲೂಕಿನ ಬೇಬಿ ಗ್ರಾಮದ ಹೆಚ್ ಪಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

ಭಸ್ತಿರಂಗಪ್ಪ ಎಂಬುವವರಿಗೆ ಸೇರಿದ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದ್ದು, ರಾತ್ರಿ ಸಿಬ್ಬಂದಿಗಳು ಊಟಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ.

ಸುಮಾರು 10ಲಕ್ಷ ಮೌಲ್ಯದ ಪೆಟ್ರೋಲ್ ಹಾಗೂ ಡಿಸೇಲ್ ರಸ್ತೆಗೆ ಹರಿದು ಹೋಗಿದೆ. ಎಂಟು ಸಾವಿರ ಲೀಟರ್ ಪೆಟ್ರೋಲ್ ಹಾಗೂ ಎರಡು ಸಾವಿರ ಲೀಟರ್ ಡಿಸೇಲ್ ವ್ಯರ್ಥವಾಗಿದೆ.

ಕಳೆದ ಎರಡೂ ತಿಂಗಳ ಹಿಂದೆಯಷ್ಟೆ ಪೆಟ್ರೋಲ್ ಬಂಕ್ ಪ್ರಾರಂಭವಾಗಿದ್ದು, ಇದುವರೆಗೂ ಬಂಕ್ ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ‌ಮಾಡಿಲ್ಲ.

ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular