Friday, April 11, 2025
Google search engine

Homeಅಪರಾಧಮಂಡ್ಯ: ಹಳೇ ದ್ವೇಷ, ಗಣೇಶ ವಿಸರ್ಜನೆ ವೇಳೆ ಯುವಕರಿಗೆ ಚಾಕು ಇರಿತ

ಮಂಡ್ಯ: ಹಳೇ ದ್ವೇಷ, ಗಣೇಶ ವಿಸರ್ಜನೆ ವೇಳೆ ಯುವಕರಿಗೆ ಚಾಕು ಇರಿತ

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಯುವಕರ ಮೇಲೆ ಹಲ್ಲೆ ಮಾಡಿ ಚಾಕು ಇರಿದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ.

ಹಳೇ ದ್ವೇಷ ಹಿನ್ನೆಲೆ ಮಾಚಹಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚ್ಚಿನ್(24) ಎಂಬಾತನ ಕೈ ಹಾಗೂ ಹೊಟ್ಟೆ ಭಾಗಕ್ಕೆ ಹಾಗೂ ನಂಜುಂಡಸ್ವಾಮಿ(26) ತಲೆ ಹಾಗೂ ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ.

ದರ್ಶನ್, ಲೋಕೇಶ್, ಪ್ರಜ್ವಲ್ ಸೇರಿದಂತೆ ಸ್ನೇಹಿತರ ಗ್ಯಾಂಗ್ ಗಲಾಟೆ ಮಾಡಿ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ದರ್ಶನ್ ಮತ್ತು ಸಚಿನ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. 5 ಬಾರಿ ಗಲಾಟೆ ನಡೆದು ಪೊಲೀಸ್ ಠಾಣೆಯಲ್ಲಿ ರಾಜಿ ಮಾಡಿಸಲಾಗಿತ್ತು. ನೆನ್ನೆ ಮತ್ತೆ ಗಲಾಟೆ ನಡೆದು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯ ಗಾಯಗೊಂಡ ಸಚಿನ್ ಕೈ ಹೊಟ್ಟೆ ಭಾಗಕ್ಕೆ ಗಾಯಗಳಾಗಿದ್ದು ಹಾಗೂ ನಂಜುಂಡಸ್ವಾಮಿಗೆ ಕಣ್ಣಿಗೆ ಗಾಯವಾಗಿದೆ.

ಸದ್ಯ ಇಬ್ಬರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular