Friday, April 11, 2025
Google search engine

Homeಅಪರಾಧಮಂಗಳೂರು: ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

ಮಂಗಳೂರು: ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

ಮಂಗಳೂರು (ದಕ್ಷಿಣ ಕನ್ನಡ): ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿ ಎಂಬಲ್ಲಿ ನಡೆದಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಕೂಲಿ ಕಾರ್ಮಿಕ ಹೊನ್ನಪ್ಪ ಗೌಡ ( 64), ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇತ್ತೀಚೆಗೆ ‌ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿರುತ್ತಿದ್ದರು. ಕುಡಿಯಲು ಹಣ ಅಡಚಣೆ ಉಂಟಾಗಿ ಜೀವನದಲ್ಲಿ ‌ಜಿಗುಪ್ಸೆಗೊಂಡು ಮಾನಸಿಕವಾಗಿ ನೊಂದಿದ್ದರು. ಮನೆಯ ಸಮೀಪದಲ್ಲಿರುವ ಬಾದಾಮಿ ಮರಕ್ಕೆ ಲುಂಗಿಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‌ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES
- Advertisment -
Google search engine

Most Popular