ಮಂಗಳೂರು (ದಕ್ಷಿಣ ಕನ್ನಡ): ಎಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಹಳಿ ದುರಸ್ತಿ ಕಾರ್ಯ ಸಂಪೂರ್ಣಗೊಂಡಿದೆ. ಹೀಗಾಗಿ ಮಂಗಳೂರು ಬೆಂಗಳೂರು ರೈಲು ಸಂಚಾರ ಆರಂಭಗೊಂಡಿದೆ.
ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿದ್ದು ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಗೊಂಡಿದೆ. ಕಳೆದ 20 ದಿನಗಳಿಂದ ಪ್ಯಾಸೆಂಜರ್ ರೈಲು ಸಂಚಾರ ಬಂದ್ ಆಗಿತ್ತು. ಎರಡು ದಿನಗಳ ಹಿಂದೆ ಗೂಡ್ಸ್ ರೈಲು ಓಡಿಸಿ ರೈಲ್ವೇ ಇಲಾಖೆಯು ರೈಲ್ವೆ ಹಳಿ ಪರೀಕ್ಷೆ ಮಾಡಿತ್ತು.