ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಲ್ಲಿರೋ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ತನ್ನ ಕಛೇರಿಯಲ್ಲಿ ಇಂದು ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ ನಡೆಸಿದರು.
ಇದೇ ವೇಳೆ ನೂರಾರು ಮಂದಿ ಸಾರ್ವಜನಿಕರು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು. ಇದೇ ವೇಳೆ ಸಚಿವರು ಕಾನೂನಾತ್ಮಕವಾಗಿ ಬಗೆಹರಿಸಲ್ಪಡುವ ಸಮಸ್ಯೆಗಳನ್ನು ಪರಿಶೀಲನೆ ನಡೆಸಿ ಶೀಘ್ರದಲ್ಲಿ ಪರಿಹಾರ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಜನರಿಂದ, ಜನರಿಗಾಗಿ ದುಡಿಯುತ್ತಿರುವ ನಮ್ಮ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಪ್ರತಿಯೊಬ್ಬರಿಗೂ ಸ್ವಸ್ಥ ಹಾಗೂ ಸುಸ್ಥಿರ ಸಮಾಜ ನಿರ್ಮಾಣ ಮಾಡಲು ಬದ್ಧವಾಗಿದೆ ಎಂದರು.
ಇದೇ ವೇಳೆ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ , ಕಾಂಗ್ರೆಸ್ ಮುಖಂಡ ಮಿಥುನ್ರೈ, ಇತರ ಸ್ಥಳೀಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.