Saturday, April 12, 2025
Google search engine

Homeಅಪರಾಧಮಂಗಳೂರು: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

ಮಂಗಳೂರು: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

ಮಂಗಳೂರು (ದಕ್ಷಿಣ ಕನ್ನಡ): ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ.

ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಪನ್ (14) ಕ್ರಿಸ್ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಗೋದಲಿ ಲೈಟಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದೆ.

ತಕ್ಷಣ ಆತನ ಅಜ್ಜಿ ಹಾಗೂ ದೊಡ್ಡಪ್ಪ ಸ್ಥಳೀಯ ಆಸ್ಪತ್ರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆವಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಾಲಕನ ತಂದೆ ತಾಯಿ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ತಮ್ಮ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಸ್ಥಳಕ್ಕೆ ವೇಣೂರು ಠಾಣಾಧಿಕಾರಿ ಶ್ರೀ ಶೈಲಾ, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಕ್ಲೇಮೆಂಟ್ ಬ್ರಗ್ಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

RELATED ARTICLES
- Advertisment -
Google search engine

Most Popular