Thursday, May 29, 2025
Google search engine

Homeಅಪರಾಧಮಂಗಳೂರು: ಅಬ್ದುಲ್ ರಹ್ಮಾನ್ ಹತ್ಯೆ: ಫರಂಗಿಪೇಟೆಯಲ್ಲಿ ರಸ್ತೆ ತಡೆ, ಸಾರ್ವಜನಿಕರ ಆಕ್ರೋಶ

ಮಂಗಳೂರು: ಅಬ್ದುಲ್ ರಹ್ಮಾನ್ ಹತ್ಯೆ: ಫರಂಗಿಪೇಟೆಯಲ್ಲಿ ರಸ್ತೆ ತಡೆ, ಸಾರ್ವಜನಿಕರ ಆಕ್ರೋಶ

ಮಂಗಳೂರು (ದಕ್ಷಿಣ ಕನ್ನಡ): ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹ್ಮಾನ್ ರ ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಗುಂಪು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಮಯ್ಯತ್ ಸ್ನಾನ ನಿರ್ವಹಿಸಲಾಯಿತು. ಮಯ್ಯತ್ ನಮಾಝ್ ಬಳಿಕ ಅಲ್ಲಿಂದ ಪೊಲೀಸ್ ಬಂದೋಬಸ್ತ್ ನಲ್ಲಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು. ನೂರಾರು ಮಂದಿ ವಾಹನಗಳಲ್ಲಿ ಆಂಬುಲೆನ್ಸ್ ಜೊತೆ ಸಾಗುತ್ತಿದ್ದಾರೆ. ಮೃತದೇಹವು ಕುತ್ತಾರ್ , ತೊಕ್ಕೊಟ್ಟು, ಪಂಪ್ ವೆಲ್ ಮಾರ್ಗವಾಗಿ ಫರಂಗಿಪೇಟೆ ತಲುಪಿದಾಗ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರ ಗುಂಪು ರಸ್ತೆ ತಡೆ ನಡೆಸಿ ಹತ್ಯೆಯನ್ನು ಖಂಡಿಸಿದರು.

ರಹ್ಮಾನ್ ಪರ ಘೋಷಣೆಗಳನ್ನು ಕೂಗಿದ ಆಕ್ರೋಶಿತ ಗುಂಪು ಸರಕಾರದ ವಿರುದ್ಧ ಘೋಷಣೆ ಕೂಗಿತು. ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿತು.

ಆಕ್ರೋಶಿತ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಪೊಲೀಸರು ಆಕ್ರೋಶಿತರನ್ನು ಸಮಾಧಾನಪಡಿಸಿ ಗುಂಪನ್ನು ಚದುರಿಸಿ ಆಂಬುಲೆನ್ಸ್ ಮುಂದೆ ಸಾಗಲು ಅನುವು ಮಾಡಿಕೊಟ್ಟರು. ಮೃತದೇಹವನ್ನು ರಹ್ಮಾನ್ ರ ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿರುವ ಮನೆಗೆ ಕೊಂಡೊಯ್ಯಲಾಗುತ್ತಿದೆ.

RELATED ARTICLES
- Advertisment -
Google search engine

Most Popular