ಮಂಗಳೂರು (ದಕ್ಷಿಣ ಕನ್ನಡ) : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆ ಮುಂದುವರಿದಿದ್ದು ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ನೋಟೀಸ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾದ್ರು.
ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ ಪೂಜಾರಿ , ಗೀತಾ,ಹಾಗೂ ಚಂದನ್ ಕಾಮತ್ ಇವರು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.
ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ಬಿಲ್ ಪಾವತಿಯಾಗಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಹಾಗೂ ತನಿಖೆಗಾಗಿ ಕರೆಸಲಾಗಿತ್ತು.