ಮಂಗಳೂರು (ದಕ್ಷಿಣ ಕನ್ನಡ): ಇತ್ತೀಚಿಗೆ ಮಂಗಳೂರು ನಗರದ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಅಡ್ಡೂರು ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಎಬ್ಬಿಸಿದ್ದರು. ಇದನ್ನು ಖಂಡಿಸಿ ಇಂದು ಅಡ್ಡೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಊರಿನ ಎಲ್ಲಾ ಧರ್ಮದ ಸಂಘಟನೆಗಳು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿ ಶಾಸಕರನ್ನು ಬಂಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಇನ್ನು ಈ ಪ್ರತಿಭಟನೆಯಲ್ಲಿ ಮಾತಾಡಿದ ಅಶ್ರಫ್ ನಡುಗುಡ್ಡೆ, ಸೌಹಾರ್ದತೆಯಿಂದ ಇರುವ ಅಡ್ಡೂರಿನ ಜನರಿಗೆ ಶಾಸಕರ ದೇಶ ಪ್ರೇಮದ ಪಾಠ ಅಗತ್ಯವಿಲ್ಲ ಎಂದರು. ಈ ಸಂದರ್ಭದಲ್ಲಿ ಊರಿನ ಎಲ್ಲಾ ಸಂಘಟನೆಯ ನಾಯಕರು ಉಪಸ್ಥಿತರಿದ್ದರು.