ಹಾವೇರಿ : ಇಂದು ಹಾವೇರಿಯಲ್ಲಿ ದುರಂತ ಸಂಭವಿಸಿದ್ದು ದೇವರ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿ ಹೊಡೆದ ಪರಿಣಾಮ ೧೩ ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟ ೧೩ ಜನ ಕುಟುಂಬಸ್ಥರಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ವೈಯಕ್ತಿಕವಾಗಿ ೫೦ ಸಾವಿರ ರೂಪಾಯಿ ಪರಿಹಾರ ನೀಡಿದ್ದಾರೆ.
ಇಂದು ನಸುಕಿನ ಜಾವ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಭೀಕರವಾಗಿ ಬಂದು ಅಪ್ಪಳಿಸಿದ ಪರಿಣಾಮ ವಾಹನದಲ್ಲಿದ್ದ ೧೭ ಜನರ ಪೈಕಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಪರವಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಿಂದ ಪರಿಹಾರ ವಿತರಣೆ ಮಾಡಲಾಯಿತು. ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಅವರು ಪರಿಹಾರದ ಹಣ ವಿತರಿಸಿದ್ದಾರೆ.