ಬೆಂಗಳೂರು : ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.
ಈ ಪರಿಷ್ಕೃತ ವೇಳಾಪಟ್ಟಿ ಪ್ರಸಕ್ತ ಸಾಲಿನ ಜೂ.15 ರಿಂದ ಅ.20ರವರೆಗೆ ಜಾರಿಯಲ್ಲಿರುತ್ತದೆ. ಪರಿಷ್ಕೃತ ಸಮಯವು ಜೂ.15 ಅಥವಾ ನಂತರ ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳಿಗೆ ಅನ್ವಯಿಸುತ್ತದೆ.
ಮುಂಗಾರು ವೇಳಾಪಟ್ಟಿ ಅನ್ವಯವಾಗುವ ರೈಲುಗಳ ವಿವರ: ರೈಲು ಸಂಖ್ಯೆ 16595/16596 ಕೆಎಸ್ಆರ್ ಬೆಂಗಳೂರು-ಕಾರವಾರ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 16585/16586 ಎಸ್ಎಂವಿಟಿ ಬೆಂಗಳೂರು- ಮುರ್ಡೇಶ್ವರ- ಎಸ್ಎಂವಿಟಿ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್.
ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರಯಶವಂತಪುರ ಟ್ರೈ ವೀಕ್ಲಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 12741/12742 ವಾಸ್ಕೋಡ-ಗಾಮಾ-ಪಾಟ್ನಾ-ವಾಸ್ಕೋಡಗಾಮಾ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್, ರೈಲು ಸಂಖ್ಯೆ 11097/11098 ಪುಣೆ-ಎರ್ನಾಕುಲಂ-ಪುಣೆ ಸಾಪ್ತಾಹಿಕ ಎಕ್ಸ್ ಪ್ರೆಸ್.
ಈ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕದ ಮುಂಚಿತವಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ನವೀಕರಿಸಲಾದ ವೇಳಾಪಟ್ಟಿಯ ಕುರಿತಾದ ಮಾಹಿತಿಯು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.