Friday, April 18, 2025
Google search engine

Homeರಾಜ್ಯಸಿಎಂ ಆರೋಪ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸಂಸದ ಕೋಟ ಶ್ರೀನಿವಾಸ ಧರಣಿ

ಸಿಎಂ ಆರೋಪ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸಂಸದ ಕೋಟ ಶ್ರೀನಿವಾಸ ಧರಣಿ

ಬೆಂಗಳೂರು: ತಾವು ಸಚಿವರಾಗಿದ್ದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪವನ್ನು ವಿರೋಧಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇಂದು ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಮುಖ್ಯಮಂತ್ರಿಗಳೇ ನಮ್ಮ ಮೇಲೆ ಸತ್ಯಕ್ಕೆ ದೂರವಾದ ಆರೋಪವನ್ನು ಮಾಡಿದ್ದೀರಿ, ಅದನ್ನು ಹಿಂಪಡೆಯಿರಿ. ಇಲ್ಲವಾದರೆ ಸಿಬಿಐ ತನಿಖೆಗೆ ಶಿಫಾರಸು ಮಾಡಿ ಎಂದು ಸಿದ್ದರಾಮಯ್ಯರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಆದರೆ ಈ ಬಗ್ಗೆ ಮುಖ್ಯಮಂತ್ರಿಯ ಮೌನ ನೋವು ತಂದಿದೆ. ಆದ್ದರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಇಟ್ಟುಕೊಂಡು ಸಾಂಕೇತಿಕವಾಗಿ ಧರಣಿ ಕೂತಿದ್ದೇನೆ, ರಾಜ್ಯದ ಜನತೆ ತೀರ್ಪು ನೀಡಲಿ ಎಂದು ಹೇಳಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶಾಸಕ ಸುರೇಶ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಎನ್. ರವಿಕುಮಾರ್, ಶಾಂತರಾಮ ಸಿದ್ದಿ ಮೊದಲಾದವರು ಸಾಥ್ ನೀಡಿದರು.

RELATED ARTICLES
- Advertisment -
Google search engine

Most Popular