Friday, April 18, 2025
Google search engine

Homeಸ್ಥಳೀಯಮುಡಾ ಹಗರಣ ಆರೋಪ: ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯಗೂ ನೋಟಿಸ್ ಸಾಧ್ಯತೆ!

ಮುಡಾ ಹಗರಣ ಆರೋಪ: ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯಗೂ ನೋಟಿಸ್ ಸಾಧ್ಯತೆ!

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.

ಹಗರಣ ಸಂಬಂಧ ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ಈಗಾಗಲೇ ಮುಡಾ ಕೇಸ್‌ನಲ್ಲಿ ಎ೨, ಎ೩ ಮತ್ತು ಎ೪ ವಿಚಾರಣೆ ನಡೆಸಲಾಗಿದ್ದು, ಈಗ ವಿಚಾರಣೆಗೆ ಬಾಕಿ ಇರುವುದು ಎ೧ ಆರೋಪಿ ಮಾತ್ರ.

ಸಿಎಂಗೆ ನೋಟಿಸ್ ನೀಡಲು ಲೋಕಾಯುಕ್ತ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪತ್ನಿ ಪಾರ್ವತಮ್ಮ ವಿಚಾರಣೆಯ ಟಿಪ್ಪಣಿ ಬರೆಯುತ್ತಿದ್ದಾರೆ. ಟಿಪ್ಪಣಿ ಕಾರ್ಯ ಮುಗಿದ ಬೆನ್ನಲ್ಲೇ ಸಿಎಂಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಡಾ ಹಗರಣ ಆರೋಪ ಸಂಬಂಧ ಲೋಕಾಯುಕ್ತ ದಾಖಲಿಸಿರುವ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಎ೧ ಆರೋಪಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular