Friday, April 11, 2025
Google search engine

Homeಅಪರಾಧಕಾನೂನುಮುಡಾ ಹಗರಣ ಕೇಸ್‌: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ಇಡಿ

ಮುಡಾ ಹಗರಣ ಕೇಸ್‌: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ಇಡಿ

ನವದೆಹಲಿ: ಮುಡಾ ಹಗರಣ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ (ಎನ್​​ಫೋರ್ಸ್ ಮೆಂಟ್ ಕೇಸ್ ಇನ್ಫರ್ಮೇಷನ್ ರಿಪೋರ್ಟ್ ) ದಾಖಲಿಸಿದೆ.

ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ.

ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ಹೀಗಾಗಿ ನಾಲ್ವರ ವಿಚಾರಣೆಗೆ ಸಮನ್ಸ್ ನೀಡಲಿದೆ.

ಯಾವುದೇ ಸಂದರ್ಭದಲ್ಲಿ ಇಡಿಯಿಂದ ದಾಳಿಯಾಗುವ ಸಾಧ್ಯತೆ ಇದೆ. ದಾಖಲೆಗಳ ಪರಿಶೀಲನೆಗೆ ದಾಳಿ ಮಾಡಬಹುದು. ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಮುಡಾ ಕಚೇರಿ ಹಾಗೂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ನಿವಾಸದ ಮೇಲೆ ಸಾಧ್ಯತೆಯಿದೆ.

RELATED ARTICLES
- Advertisment -
Google search engine

Most Popular