Friday, April 11, 2025
Google search engine

Homeರಾಜ್ಯಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ೧೮ ಅಧಿಕಾರಿಗಳಿಗೆ ೩ ದಿನದೊಳಗೆ ತನಿಖೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

೨೦೧೭ರಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಅಕ್ರಮ ಭೂ ವ್ಯವಹಾರಗಳ ಕುರಿತು ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಮೈಸೂರು ತಾಲೂಕಿನ ಹಿನಕಲ್​ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಇಲ್ಲಿನ ಬಡಾವಣೆ ಅಭಿವೃದ್ಧಿಪಡಿಸಲು ಮುಡಾ ೭ ಎಕರೆ ೧೮ ಗುಂಟಾ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ, ೧೯೯೬-೯೭ರಲ್ಲಿ ಹಿನಕಲ್ ಪಂಚಾಯಿತಿಯ ಅಂದಿನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸದಸ್ಯರು ಬಡವರಿಗೆ ನಿವೇಶನಗಳನ್ನು ಸೃಷ್ಟಿಸಿ ಹಂಚಿಕೆ ಮಾಡುವ ನೆಪದಲ್ಲಿ ಈ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮುಡಾದಿಂದ ಸೂಕ್ತ ಅನುಮತಿ ಇಲ್ಲದೇ ಸುಳ್ಳು ದಾಖಲೆಗಳನ್ನು ತಯಾರಿಸಿ ೨೫೨೫ ಅಡಿ ಅಳತೆಯ ೩೫೦ಕ್ಕೂ ಹೆಚ್ಚು ನಿವೇಶನಗಳನ್ನು ಬಿಇಎಂಎಲ್ ನೌಕರರು, ಶಾಲಾ ಶಿಕ್ಷಕರು, ಪಂಚಾಯಿತಿ ಪಿಡಿಒಗಳು, ಅಂಚೆ ಕಚೇರಿ ನೌಕರರು, ಸರ್ಕಾರಿ ನೌಕರರು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ.

ಗಂಗರಾಜು ಅವರು ೨೦೧೭ರಲ್ಲಿ ಮುಡಾ ಮತ್ತು ಎಸಿಬಿಯಲ್ಲಿ ಅತಿಕ್ರಮಣ ಆಸ್ತಿಯನ್ನು ವಾಪಸ್ ಪಡೆಯುವಂತೆ ದೂರು ಸಲ್ಲಿಸಿದ್ದರು. ೨೦೨೨ ರಲ್ಲಿ, ಎಸಿಬಿ ಎಫ್‌ಐಆರ್ ಅನ್ನು ದಾಖಲಿಸಿತು, ನಂತರ ಅದನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಯಿತು. ಇದೀಗ ಲೋಕಾಯುಕ್ತರು ೨೦೧೭ರಲ್ಲಿ ಹುದ್ದೆಯಲ್ಲಿದ್ದ ಸೂಪರಿಂಟೆಂಡೆಂಟ್ ಇಂಜಿನಿಯರ್, ಕಾರ್ಯದರ್ಶಿ ಸೇರಿದಂತೆ ೧೮ ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳಲ್ಲಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular