Friday, January 30, 2026
Google search engine

Homeಸ್ಥಳೀಯಮೈಸೂರು: ಬೋನಿಗೆ ಬಿದ್ದ ಚಿರತೆ

ಮೈಸೂರು: ಬೋನಿಗೆ ಬಿದ್ದ ಚಿರತೆ

ಮೈಸೂರು: ಚಿರತೆ ಸೆರೆ ಹಿಡಿಯಲು ಇಟ್ಟ ಬೋನಿಗೆ ತಾಯಿ ಚಿರತೆ ಬಿದ್ದಿದ್ದು,  ಆಯರಹಳ್ಳಿ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮಸ್ಥರು ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಕಬ್ಬಿಣ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿತ್ತು. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆ ಮರಿಯನ್ನು ರಕ್ಷಿಸಿ ತಾಯಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು ಅದರಂತೆ ಗುರುವಾರ ರಾತ್ರಿ ಮರಿಗಳನ್ನು ಹುಡುಕಿಕೊಂಡು ಬಂದ ಚಿರತೆ ಅರಣ್ಯ ಅಧಿಕಾರಿಗಳು ಇಟ್ಟ ಬೋನ್ ನಲ್ಲಿ ಬಂಧಿಯಾಗಿದೆ.

ಈ ಕುರಿತು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular