ಮೈಸೂರು: ಹಾಡುಹಗಲೇ ಚಿನ್ನ ವ್ಯಾಪಾರಿ ಮತ್ತು ಪತ್ನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಮೈಸೂರಿನ ಹೂಟಗಳ್ಳಿಯ ಕೆಎಚ್ ಬಿ ಕಾಲೋನಿಯಲ್ಲಿ ನಡೆದಿದೆ.
ಬಾಬುರಾವ್ (57), ಪತ್ನಿ ಕಮಲಬಾಯಿ (52) ಚಾಕು ಇರಿತಕ್ಕೆ ಒಳಗಾದವರು.
ಅಪರಿಚಿತರಿಬ್ಬರು ಗೃಹಪ್ರವೇಶ ಆಹ್ವಾನ ಪತ್ರ ನೀಡುವ ನೆಪದಲ್ಲಿ ಬಂದು ಚಿನ್ನದ ವ್ಯಾಪಾರಿ ಬಾಬುರಾವ್ ಅವರನ್ನು ನಿಮ್ಮ ಪುತ್ರ ಹರೀಶ್ ಎಲ್ಲಿ ಎಂದು ಕೇಳಿದ್ದಾರೆ. ಹರೀಶ್ ಮನೇಲಿ ಇಲ್ಲ ಎಂದು ಬಾಬುರಾವ್ ಎಂದು ಹೇಳಿದ್ದಾರೆ.
ಈ ವೇಳೆ ಕುಪಿತಗೊಂಡ ಅಪರಿಚಿತರಿಬ್ಬರು ಬಾಬುರಾವ್ ಮತ್ತು ಪತ್ನಿ ಕಮಲಬಾಯಿಗೆ ಚಾಕುವಿನಿಂದ ಇರಿದಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.