Tuesday, April 22, 2025
Google search engine

Homeಅಪರಾಧಮೈಸೂರು: ಪತ್ನಿಯ ಶೀಲ ಶಂಕಿಸಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

ಮೈಸೂರು: ಪತ್ನಿಯ ಶೀಲ ಶಂಕಿಸಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

ಮೈಸೂರು: ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಅಪರಾಧಿಗೆ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ.

ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ಸುಬ್ಬ ಅಲಿಯಾಸ್​​​ ರವಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ.‌‌ ಈತನಿಗೆ‌ 10 ವರ್ಷದ ಹಿಂದೆ ನಂಜನಗೂಡು ಪಟ್ಟಣದ ರಾಜಾಜಿ ಕಾಲೋನಿಯ ನಂಜುಂಡ ಎಂಬುವರ ಮಗಳು ಅಮುದಾ ಅವರನ್ನು ಮದುವೆ ಮಾಡಿಸಲಾಗಿತ್ತು.‌ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಮದುವೆಯಾದ 2-3 ವರ್ಷದ ನಂತರ ಸುಬ್ಬ ತನ್ನ ಪತ್ನಿ ಅಮುದಾ ಅವರ ಶೀಲ ಶಂಕಿಸಿ ಪ್ರತಿದಿನ ಮದ್ಯಪಾನ ಮಾಡಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ. ಹೀಗೆ 2020ರ ಡಿಸೆಂಬರ್​ 6 ರಂದು ಸಂಜೆ ಸುಬ್ಬ ಮದ್ಯಪಾನ ಮಾಡಿ ಬಂದು ಪತ್ನಿ ಜತೆ ಇದೇ ವಿಚಾರಕ್ಕೆ ಜಗಳ ತೆಗೆದಿದ್ದ. ಅಂದೇ ಅಮುದಾ ಸಬ್ಬನಿಗೆ ಊಟ ಬಡಿಸುತ್ತಿದ್ದಾಗ ಅವಳ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಅಮುದಾರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಳು.

ಸಾವಿನ ಬಗ್ಗೆ ಮೃತಳ ಸಹೋದರ ದೂರು ನೀಡಿದ್ದು, ಅಪರಾಧಿ ಸುಬ್ಬನ ವಿರುದ್ಧ ಕಲಂ 498(ಎ), 302 ಐಪಿಸಿ ರೀತ್ಯ ಪ್ರಕರಣ ದಾಖಲಿಸಿಕೊಂಡು ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀ ಲಕ್ಷ್ಮೀಕಾಂತ ತಳವಾರ್​ ಅವರು ತನಿಖೆ ಮಾಡಿ ಸುಬ್ಬು ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ್​ ಸೋಮಕ್ಕಳವರ್​​​​​ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದ್ದರಿಂದ ಸುಬ್ಬನಿಗೆ 2 ವರ್ಷ ಕಠಿಣ ಶಿಕ್ಷೆ ಮತ್ತು 1,000 ರೂ., ದಂಡವನ್ನು ವಿಧಿಸಿದ್ದಲ್ಲದೇ, ಜೀವಾವಧಿ ಶಿಕ್ಷೆ ಮತ್ತು 5,000 ದಂಡವನ್ನು ವಿಧಿಸಿ ತೀರ್ಪು ನೀಡಿದೆ.

ಪ್ರಕರಣದಲ್ಲಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಬಿ.ಈ. ಯೋಗೇಶ್ವರ ಅವರು ಸರ್ಕಾರದ ಪರ ವಾದ ಮಂಡಿಸಿದರು.

RELATED ARTICLES
- Advertisment -
Google search engine

Most Popular