ಬೆಂಗಳೂರು: ವಸತಿ ಯೋಜನೆಗಳಲ್ಲಿ ಮುಸ್ಲಿಂ ಮೀಸಲಾತಿ 10%ರಿಂದ 15%ಕ್ಕೆ ಹೆಚ್ಚಿಸಲು ಸರ್ಕಾರ ಅನುಮೋದನೆ ನೀಡಿರುವ ಕ್ರಮ ವಿರೋಧಕ್ಕೆ ಗ್ರಾಸವಾಗಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಬಗ್ಗೆ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಟಿಪ್ಪು ಸುಲ್ತಾನ್ನ ಆಡಳಿತ ಶೈಲಿಯಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಸೌಲಭ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಎಸ್.ಸಿ, ಎಸ್.ಟಿ ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಯ ಮೂಲಕ ಮುಸ್ಲಿಂ ಸಮುದಾಯಕ್ಕೆ ವರ್ಗಾಯಿಸಲಾಗುತ್ತಿದೆ ಎಂದು ಕೋಪ ವ್ಯಕ್ತಪಡಿಸಿದರು. ಈ ನಿರ್ಧಾರ ಎಸ್.ಸಿ, ಎಸ್.ಟಿ, ಮತ್ತು ಒಬಿಸಿ ಸಮುದಾಯದ ಮೇಲೆ ತೀವ್ರ ಅನ್ಯಾಯವಾಗುತ್ತಿದ್ದು, ಸರ್ಕಾರದ ಕ್ರಮದ ವಿರುದ್ಧ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.