ಮಂಡ್ಯ: ಮಂಡ್ಯದ ನಾಗಮಂಗಲ ಗಲಭೆ ಪ್ರಕರಣಕ್ಕೆ ಈಗ ಮೆಗಾ ಟ್ವಿಸ್ಟ್ ಸಿಕ್ಕಿದೆ. ಗಲಭೆ ಬಗ್ಗೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಅಮಾನತುಗೊಳಿಸಲಾಗಿದೆ.
ನಾಗಮಂಗಲ ಕೋಮುಗಲಭೆ ಬಳಿಕ ದೂರು ನೀಡಿದ್ದ ಇಲ್ಲಿನ ಟೌನ್ ಠಾಣೆಯ ಪಿಎಸ್ಐ ಬಿ.ಜೆ.ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶಿಸಿದ್ದಾರೆ.
ಗಣೇಶ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಟಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಪಿಎಸ್ಐ ರವಿ ಅವರನ್ನ ಅಮಾನತುಗೊಳಿಸಲಾಗಿದೆ. ಅಲ್ಲದೇ ಪಿಎಸ್ಐ ಜೊತೆಗೆ ಠಾಣೆಗೆ ಗುಪ್ತ ಮಾಹಿತಿ ಸಂಗ್ರಹ ಪೇದೆ ರಮೇಶ್ ಅವರನ್ನೂ ಅಮಾನತು ಮಾಡಲಾಗಿದೆ. ಕೋಮು ಗಲಭೆ ಪ್ರಕರಣದಲ್ಲಿ ಒಟ್ಟು ನಾಲ್ವರು ಅಧಿಕಾರಿಗಳ ತಲೆತಂಡವಾಗಿದೆ. ಡಿವೈಎಸ್ಪಿ ಸುಮಿತ್, ಪಿಐ ಅಶೋಕ್ ಅವರನ್ನು ಈ ಮೊದಲೇ ಅಮಾನತುಗೊಳಿಸಲಾಗಿತ್ತು.