ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದರೆ ಇಡೀ ಭಾರತ ದೇಶವನ್ನು ಮೈಸೂರಿನ ಕಡೆಗೆ ಆಕರ್ಷಿಸುವಂತಹ ವ್ಯಕ್ತಿತ್ವ. ಈ ವ್ಯಕ್ತಿತ್ವ ಬರುವುದಕ್ಕೆ ಮೂಲ ಕಾರಣ ಅವರ ನಡೆ ಮತ್ತು ನುಡಿ ಮತ್ತು ನಿರ್ಧಾರಗಳು ಹಾಗೂ ಅವರ ಆದರ್ಶ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರು ಹೇಳಿದರು.
ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಒಡೆಯರ್ ಆಡಳಿತ ದಾರಿಯು ಎಲ್ಲಾ ಕಾಲದಲ್ಲೂ ಜನರ ಪರವಾಗಿ, ಅಭಿವೃದ್ಧಿಯ ಪರವಾಗಿ, ಮಾನವನ ಸಂಪನ್ಮೂಲ ಮನರಂಜನೆ ಮತ್ತು ಅದರ ಸದುಪಯೋಗಕ್ಕಾಗಿ. ತಮ್ಮ ಆಡಳಿತದಲ್ಲಿ ದೊಡ್ಡ ಶಕ್ತಿಯಾಗಿ ದೇಶದ ಮುಂದೆ ಕಾಣಿಸುತ್ತಿದ್ದರು ಎಂದು ಹೇಳಿದರು.
ಮೈಸೂರು ಎಂದರೆ ಸ್ವತಂತ್ರ ಬರುವುದಕ್ಕಿಂತ ಮುಂಚೆ ಕತ್ತಲಲ್ಲಿ ಇದ್ದರೂ, ನಾಗರಿಕತೆಯ ಗುಣಲಕ್ಷಣಗಳು ಗೊತ್ತಿರಲಿಲ್ಲ ಶಿಕ್ಷಣ ಇರಲಿಲ್ಲ, ಅಸಮಾನತೆ, ಅಸ್ಪೃಶ್ಯತೆ, ಮಹಿಳಾ ದೌರ್ಜನ್ಯಗಳು, ದೇವದಾಸಿ ಪದ್ಧತಿ ಜೀವಂತವಾಗಿದ್ದ ಕಾಲವಾಗಿತ್ತು. ಆದರೂ ನಾವು ಏ?ದಲ್ಲಿ ಮೊದಲನೆಯ ರಾಜ್ಯ ಹೈಡ್ರೋ ಎಲೆಕ್ಟ್ರಾನಿಕ್ ನಿಂದ ವಿದ್ಯುತ್ ಉತ್ಪಾದನೆ ಮಾಡಿದ ರಾಜ್ಯ. ಕತ್ತಲೆಯಿಂದ ಬೆಳಕಿನ ಕಡೆಗೆ ಹೋಗುವಂತದ್ದು, ಇಡೀ ಏ? ಖಂಡದಲ್ಲಿ ಮೈಸೂರಲ್ಲಿ ಮೊದಲಿಗೆ ಬೀದಿ ದೀಪವನ್ನು ಆಳವಡಿಸಲಾಯಿತು ಎಂದು ತಿಳಿಸಿದರು.
ಜನರ ಜೀವನದ ಬಗ್ಗೆ ಪರಿಕಲ್ಪನೆ ತುಂಬಿಕೊಂಡಿದ್ದ, ಅವರು ವಿದ್ಯುತ್ ಚ್ಛಕ್ತಿ ಎಂದರೆ ಗೃಹಬಳಕೆ, ಕೃಷಿ ಮತ್ತು ಕೈಗಾರಿಕೆ ಅವಶ್ಯಕತೆ ಬೇಕಾದಂತಹ ಅತ್ಯಂತ ಅಮೂಲ್ಯವಾದಂತಹ ವಸ್ತು. ವಿದ್ಯುತ್ ಚ್ಛಕ್ತಿ ಇದು ಏ? ಖಂಡದಲ್ಲಿ ಕತ್ತಲೆಯಲ್ಲಿ ಇದ್ದಾಗ ಅವರು ವಿದ್ಯುತ್ ಚ್ಛಕ್ತಿ ತಂದು ಕೊಟ್ಟವರು. ಸ್ವಾತಂತ್ರ್ಯ ಬರುವುದಕ್ಕೂ ಮೊದಲೇ ಉತ್ತಮ ದೃಷ್ಟಿಕೋನ ಅವರ ಆಡಳಿತ ಇತ್ತು ಎಂದು ತಿಳಿಸಿದರು.
ಆಡಳಿತ ಮಾಡುವವರು ಪ್ರಜಾಪ್ರಭುತ್ವವಾದಿಗಳಾಗಿ ಇರಬೇಕು. ಪ್ರಜಾಪ್ರಭುತ್ವವಾದಿ ಜನರಿಗೋಸ್ಕರ, ಜನರ ಬದುಕಿ ಗೋಸ್ಕರ, ಅವರ ಏಳಿಗೆಗೋಸ್ಕರ ಸಮುದಾಯದ ಸೌಹಾರ್ದತೆ ಗೋಸ್ಕರ ಮತ್ತು ಅವರ ಸ್ವಾಭಿಮಾನ ಮತ್ತು ಸ್ವರಾಜ್ಯದ ಬದುಕಿಗಾಗಿ ಅವರು ತಮ್ಮ ಆಡಳಿತ ಕಾಲವನ್ನು ನಡೆಸಿದ್ದಾರೆ. ಇಡೀ ಆಡಳಿತ ಜೀವನದೂದ್ದಕ್ಕೂ ಅವರು ಮಾಡಿದಂತಹ ಕೆಲಸಗಳು ಇಂದು ನಮ್ಮ ಕಣ್ಣ ಮುಂದೆ ಗೋಚರಿಸುತ್ತಿವೆ ಎಂದು ಹೇಳಿದರು.
ಅವರು ಕೇವಲ ಒಬ್ಬ ರಾಜನಾಗಿರಲಿಲ್ಲ ಶಿಕ್ಷಣದಲ್ಲಿ ಉನ್ನತ ಅಧ್ಯಯನವನ್ನು ಮಾಡಿದವರು. ಶಿಕ್ಷಣಕ್ಕೆ ಮಹತ್ವ ಕೊಟ್ಟವರು. “ಬುದ್ಧ ಹೇಳಿರುವಂತೆ ನಿನಗೆ ನೀನೆ ಗುರು ನಿನಗೆ ನೀನೆ ಬೆಳಕು”. ಎಂಬುವಂತೆ ನಮಗೆ ಶಿಕ್ಷಣ ಬೇಕೇ ಬೇಕು ಎಂದು ಶಿಕ್ಷಣಕ್ಕೆ ಮಹತ್ವ ನೀಡಿದವರು ಎಂದು ತಿಳಿಸಿದರು.
ಮೈಸೂರಿನ ವಿಶ್ವವಿದ್ಯಾನಿಲಯ, ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ನಮ್ಮ ಕಣ್ಮುಂದೆ ಇದೆ. ದಲಿತರು, ಹಿಂದುಳಿದವರು, ಮಹಿಳೆಯರು ಎಲ್ಲರಿಗೂ ಶಿಕ್ಷಣವು ಸಿಗಬೇಕು ಎನ್ನುವ ಸಲುವಾಗಿ ಶಿಕ್ಷಣದ ಮಹತ್ವದ ಬಗ್ಗೆ ಅವರು ನಿಲುವನ್ನು ಪಡೆದರು ಎಂದು ಹೇಳಿದರು.
ಮಹಿಳಾ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ಕೊಟ್ಟರು ಅ? ಅಲ್ಲದೆ ಆರೋಗ್ಯವಾಗಿ ಇಲ್ಲದೆ ಇದ್ದರೆ ಸಮಾಜ ಸದೃಢವಾಗಿ ಇರುವುದಿಲ್ಲ ಎಂದು ಸ್ವಂತ ಅವರ ಅಕ್ಕ ಕ್ಷಯ ರೋಗಕ್ಕೆ ತುತ್ತಾಗಿ ಸಾವನಪ್ಪಿವುದರ ಜೊತೆಗೆ ಅವರ ಜೊತೆ ಇನ್ನೂ ಮೂರು ನಾಲ್ಕು ಜನ ಕೂಡ ಕ್ಷಯ ರೋಗಕ್ಕೆ ತುತ್ತಾಗಿದ್ದು ಅದನ್ನು ಗಮನಿಸಿ ಸುಮಾರು ೩೦ ಏಕರೆ ವಿಸ್ತಾರದ ಪ್ರದೇಶದಲ್ಲಿ ಸ್ಯಾನಿಟೋರಿಯಂ ಆಸ್ಪತ್ರೆ ಕಟ್ಟಿದ್ದಾರೆ. ಶಿಕ್ಷಣದ ಬಗ್ಗೆ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತನ್ನು ಕೊಟ್ಟು ಸಮಾಜವನ್ನು ಆರೋಗ್ಯವಾಗಿ ಇಡುವುದರ ಜೊತೆಗೆ ಎಲ್ಲರ ಸಹಭಾಗಿತ್ವವನ್ನು ಬಯಸುವಂತಹ ಒಬ್ಬ ಶ್ರೇ? ರಾಜನಾಗಿದ್ದರು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾತನಾಡಿ ಇಡೀ ದೇಶವೇ ಮೈಸೂರಿನ ಕಡೆ ತಿರುಗಿ ನೋಡಿವ ಆಡಳಿತ ಮಾಡಿದಂತವರು ಯಾರಾದರೂ ಇದ್ದರೆ ಅವರು ಮೈಸೂರಿನ ನಾಲ್ವಡಿ ಕೃ?ರಾಜ ಒಡೆಯರ್ ಅವರು ಎಂದು ಹೇಳಿದರು.
ಇಂತಹ ಮಹಾನ್ ರಾಜರ ಜಯಂತಿಯನ್ನು ಯಾಕೆ ಮಾಡುತ್ತಿದ್ದೇವೆ ಎಂದರೆ ಇವರ ಜಯಂತ್ಯೋತ್ಸವದಿಂದ ಅವರು ಮಾಡಿದಂತಹ ಕೆಲಸಗಳನ್ನು ನಮ್ಮ ಯುವ ಪೀಳಿಗೆಗೆ ಹಾಗೂ ಯುವಕರಿಗೆ ತಿಳಿಸುವಂತಹ ಪ್ರಯತ್ನದಲ್ಲಿ ಇಂತಹ ಜಯಂತೋತ್ಸವವನ್ನು ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಅನಿತಾ ಎಂ ಎಸ್ ಅವರು ವಿಶೇಷ ಉಪನ್ಯಾಸ ನುಡಿ ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬರು. ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃ?ರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಬೆಂಗಳೂರು ಸಾಕ? ಪ್ರಸಿದ್ಧಿ ಪಡೆದಿದೆ. ದೇಶ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು ಎಂದು ತಿಳಿಸಿದರು.
ಮಾಹಿತಿ ತಂತ್ರಜ್ಞಾನ, ಕೈಗಾರಿಕೆಗಳು, ಸ್ಟಾರ್ಟ್ ಅಪ್, ಶೈಕ್ಷಣಿಕ ವಲಯ ಹೀಗೆ ಬೆಂಗಳೂರು ಹತ್ತು ಹಲವು ಕ್ಷೇತ್ರಗಳಲ್ಲಿ ಇಂದು ವಿಶ್ವವ್ಯಾಪ್ತಿಯಾಗಿದೆ. ಆದರೆ ಈ ಸಾಧನೆ ಕೇವಲ ಒಂದೆರಡು ದಶಕಗಳಲ್ಲಿ ಸಾಧನೆಯಾದದ್ದಲ್ಲ. ಅದರ ಹಿಂದೆ ನೂರಾರು ವ?ಗಳ ಪರಿಶ್ರಮವಿದೆ. ಈ ಎಲ್ಲವೂ ಮೈಸೂರಿನ ಪ್ರಸಿದ್ಧ ಮಹಾರಾಜರಾಗಿದ್ದ ಶ್ರೀ ನಾಲ್ವಡಿ ಕೃ?ರಾಜ ಒಡೆಯರ್ ಅವರು ಹಾಕಿದ ಅಡಿಪಾಯದ ಮೇಲೆ ಎದ್ದು ನಿಂತಿರುವ ಭವ್ಯ ಸೌಧವಾಗಿದೆ ಎಂದು ತಿಳಿಸಿದರು.
ನಾಲ್ವಡಿ ಕೃ?ರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿ?ತ್ನ ಶಾಸಕರಾದ ಡಿ. ತಿಮ್ಮಯ್ಯ, ಕೃ?ರಾಜ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾದ ಜಿ ಲಕ್ಷ್ಮಿಕಾಂತ ರೆಡ್ಡಿ, ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ. ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ ಸುದರ್ಶನ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.