ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು 12ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಅಂಬಿಗರ ಚೌಡಯ್ಯ ಅವರು ಸಹ ಒಬ್ಬರಾಗಿದ್ದಾರೆ. ತಮ್ಮದೇ ಆದ ವಿಶಿಷ್ಟ ವಚನಗಳ ಮೂಲಕ ಅಂಬಿಗರ ಚೌಡಯ್ಯ ಅವರು ಗಮನಸೆಳೆದಿದ್ದಾರೆ. ಅಂದಿನ ಕಾಲದ ಶೋಷಣೆ ವಿರುದ್ದ ತಮ್ಮದೇ ಆದ ವಚನಗಳಿಂದ ಎಚ್ಚರಿಸಿದರು ಎಂದರು. ಸಮಾಜದ ಜನತೆ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಶ್ರಮ ಜೀವಿಗಳಾಗಿರುವ ಸಮುದಾಯ ಮಕ್ಕಳ ಮುಂದಿನ ಭವಿಷ್ಯದ ದೃಷ್ಠಿಯಿಂದ ಶಿಕ್ಷಣಕ್ಕೆ ವಿಶೇಷ ಗಮನಹರಿಸಿ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ಅಂಬಿಗರ ಚೌಡಯ್ಯನವರು ಬಸವಣ್ಣನವರ ಕಾಯಕ ತತ್ವದಲ್ಲಿ ಅಪಾರವಾದ ನಂಬಿಕೆ ಉಳ್ಳವರಾಗಿದ್ದರು. ಅಂಬಿಗರ ಚೌಡಯ್ಯನವರು ತಮ್ಮ ಹೆಸರಿನಲ್ಲೇ ವಚನಾಂಕಿತವನ್ನು ಬಳಸಿ ರಚಿಸಿರುವ ವಚನಗಳಲ್ಲಿ ಆಳವಾದ ಅನುಭವ, ಸಾಮಾಜಿಕ ಪ್ರಜ್ಞೆ ಕಾಣಬಹುದಾಗಿದೆ ಎಂದರು. ಮುಖಂಡರಾದ ಗು. ಪುರುಷೋತ್ತಮ್ ಅವರು ಮಾತನಾಡಿ ಅಂಬಿಗರ ಚೌಡಯ್ಯನವರು ಸಮಾಜದ ಡಂಬಾಚಾರಗಳನ್ನು ನಿರ್ಬೀತಿಯಿಂದ ಕಟುವಾಗಿ ಟೀಕಿಸಿದರು. ಅವರ ವಚನಗಳಲ್ಲಿ ವೈಚಾರಿಕತೆಯನ್ನ ನಿರೂಪಿಸಿದ್ದಾರೆ. ತಾರತಮ್ಯ ನೀತಿಯನ್ನು ವಿರೋಧಿಸಿದ್ದಾರೆ. ಇತರೆ ವಚನಕಾರರಿಗಿಂತ ಬಿನ್ನರಾಗಿದ್ದ ಅಂಬಿಗರ ಚೌಡಯ್ಯ ಅವರು ನುಡಿದಂತೆ ನಡೆದವರು ಎಂದರು. ಸಂಘಟನೆಗಳ ಮುಖಂಡರಾದ ಪ್ರಕಾಶ್, ಇನ್ನಿತರರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್