ಮಡಿಕೇರಿ: ಕಾವೇರಿಗಾಗಿ ಇಂದು ರಾಜ್ಯಾದ್ಯಂತ ಬಂದ್ ಪ್ರತಿಭಟನೆಗಳು ನಡೆಯುತ್ತಿದ್ದರೆ ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಮಾತ್ರ ಯಾವುದೇ ಬಂದ್ ಇಲ್ಲವಾಗಿದೆ. ಸಂಘ ಸಂಸ್ಥೆಗಳು ಕನ್ನಡ ಪರ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿಲ್ಲ. ಎಂದಿನಂತೆ ಜನಜೀವನ ಆರಂಭವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕಿಗಳಲ್ಲೂ ಕೂಡ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ನಡೆಯುತ್ತಿಲ್ಲ. ಬೆಳಗ್ಗೆಯಿಂದಲೇ ಎಂದಿನಂತೆ ಎಲ್ಲಾ ಚಟುವಟಿಕೆಗಳು ಆರಂಭವಾಗಿವೆ.
ರಸ್ತೆಯಲ್ಲಿ ಆಟೋ ರಿಕ್ಷಾಗಳು, ಸರ್ಕಾರಿ ಬಸ್ಗಳು ಸಂಚಾರ ಮಾಡುತ್ತಿದ್ದು, ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಎಂದಿನಂತಿದೆ. ಶಾಲಾ ಕಾಲೇಜುಗಳು ಆರಂಭವಾಗಿದ್ದು, ಯಾವುದೇ ತೊಂದರೆ ಇಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದಾರೆ. ಮಡಿಕೇರಿ ನಗರದಲ್ಲಿ ಎಂದಿನಂತೆ ಜನಜೀವನ ನಡೆಯುತ್ತಿದ್ದು, ಖಾಸಗಿ ಬಸ್ಗಳು ಸರ್ಕಾರಿ ಕಚೇರಿಗಳು ಆರಂಭವಾಗಿವೆ.