Saturday, April 19, 2025
Google search engine

Homeರಾಜ್ಯಯಾವುದೇ ಕಾರಣಕ್ಕೂ ಗ್ಯಾರಂಟಿಗಳುನ್ನು ನಿಲ್ಲಿಸುವುದಿಲ್ಲ : ರಾಮಲಿಂಗಾ ರೆಡ್ಡಿ

ಯಾವುದೇ ಕಾರಣಕ್ಕೂ ಗ್ಯಾರಂಟಿಗಳುನ್ನು ನಿಲ್ಲಿಸುವುದಿಲ್ಲ : ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

ಇಂದು ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದರು.

ಗ್ಯಾರಂಟಿ ಯೋಜನೆಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎನ್ನುವುದಕ್ಕೂ ಸಂಬಂಧವಿಲ್ಲ. ಗ್ಯಾರಂಟಿಗಳನ್ನು ಮತ ಪಡೆಯಲು ನಾವು ನೀಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ ಅಂತ ತಿಳಿಸಿದರು.

RELATED ARTICLES
- Advertisment -
Google search engine

Most Popular