Friday, April 18, 2025
Google search engine

Homeರಾಜ್ಯಸುದ್ದಿಜಾಲಫೆ.1 ರಂದು ಗುತ್ತಿಗೆ ನೌಕರರ ಸಂಘದ ರಾಜ್ಯ ಮಟ್ಟದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ

ಫೆ.1 ರಂದು ಗುತ್ತಿಗೆ ನೌಕರರ ಸಂಘದ ರಾಜ್ಯ ಮಟ್ಟದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ

ಸಮಾವೇಶಕ್ಕೆ ಆಗಮಿಸುವಂತೆ ಶಾಸಕ ಡಿ.ರವಿಶಂಕರ್, ಡಾ.ನಟರಾಜು ಆಹ್ವಾನ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಬೆಂಗಳೂರು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ (ಎನ್.ಹೆಚ್.ಎಂ.) ಗುತ್ತಿಗೆ ನೌಕರರ ಸಂಘದ ರಾಜ್ಯ ಮಟ್ಟದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ ಮೈಸೂರಿನಲ್ಲಿ ನಡೆಯಲಿದೆ.

ಫೆ.1ರ ಶನಿವಾರ ಮೈಸೂರಿನ ಮಹಾರಾಜ ಕಾಲೇಜಿನ ಮೈಧಾನದ ಅವರಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇರವೇರಿಸಿದ್ದು, ಸಂಘದ ರಾಜ್ಯ ಅಧ್ಯಕ್ಷ ಮಮಿತ್ ಗಾಯಕ್ವಾಡ್ ವಹಿಸಿಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೆ.ಆರ್.ನಗರಲ್ಲಿ ಶಾಸಕ ಡಿ.ರವಿಶಂಕರ್ , ಮಾಜಿ ಸಚಿವ ಎಚ್.ವಿಶ್ವನಾಥ್, ಮತ್ತು ತಾಲೂಕು ಆರೋಗ್ಯಧಿಕಾರಿ ಡಾ.ನಟರಾಜು, ಕೆ.ಆರ್.ನಗರ ಸಾರ್ವಜನಿಕ ಆಡಳಿತಧಿಕಾರಿ ಡಾ.ನವೀನ್ ಸೇರಿದಂತೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನ‌ ಆಸ್ವತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗಳನ್ನ ಸಮುದಾಯ ಆರೋಗ್ಯಾಧಿಕಾರಿಗಳ‌ ತಾಲೂಕು ಅಧ್ಯಕ್ಷ ರಂಗಸ್ವಾಮಿ ನೇತೃತ್ವದಲ್ಲಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ರಂಗಸ್ವಾಮಿ ರಾಜ್ಯದ ಎಲ್ಲಾ ಜಿಲ್ಲೆಗಳ ಸಮುದಾಯ ಅರೋಗ್ಯಧಿಕಾರಿಗಳನ್ನು ಒಂದೂಗೂಡಿಸಿ ಈ ಸಮಾವೇಶ ಮಾಡಲಾಗುತ್ತಿದ್ದು ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಾದ ಕುಪ್ಪೆ ಸಚಿನ್, ಮನೋಜ್ ಕುಮಾರ್ ಮಧುಸೂದನ್, ಸುಮಾ ಮಹೇಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular