Thursday, April 17, 2025
Google search engine

Homeಅಪರಾಧಕಾನೂನುನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ

ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರು ಬೆನ್ನು ನೋವಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ ೭ ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ನಟ ದರ್ಶನ್ ಭೇಟಿಗೆ ೭ ಜನರು ಕೇರ್ ಟೇಕರ್ಸ್ ಇದ್ದು, ಅವರನ್ನು ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶವಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ.

ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತೆಯಲ್ಲಿ ದರ್ಶನ್‌ಗೆ ಸ್ಪೆಷಲ್ ಸೂಟ್ ವ್ಯವಸ್ಥೆ ಮಾಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಸ್ಪೆಷಲ್ ರೂಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES
- Advertisment -
Google search engine

Most Popular