Tuesday, April 22, 2025
Google search engine

Homeರಾಜ್ಯಸುದ್ದಿಜಾಲಆಪರೇಷನ್ ಕಮಲ ರಾಜ್ಯದಲ್ಲಿ ವಿಫಲವಾಗಲಿದೆ: ಮಧು ಬಂಗಾರಪ್ಪ

ಆಪರೇಷನ್ ಕಮಲ ರಾಜ್ಯದಲ್ಲಿ ವಿಫಲವಾಗಲಿದೆ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿಯವರು ನಡೆಸಲು ಹೊರಟಿರುವ ಆರಪೇಷನ್ ಕಮಲ ಯಶಸ್ವಿಯಾಗುವುದಿಲ್ಲ, ಸಂಪೂರ್ಣ ವಿಫಲವಾಗಲಿದೆ ಎಂದು ಶಿವಮೊಗ್ಗ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಗರು ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಯತ್ನ ಮಾಡಬೇಡಿ. ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ. ಹಾಗಿರುವಾಗ ಖಂಡಿತವಾಗಿಯೂ ಅವರ ಆಪರೇಷನ್ ಕಮಲ ವಿಫಲವಾಗಲಿದೆ. ಈ ರೀತಿ ಶಾಸಕರನ್ನು ಸೆಳೆಯುವ ಯತ್ನ ಮಾಡುವುದು ಪ್ರಜಾಪ್ರಭುತ್ವಕ್ಕೆ ವಿರೋಧ. ಬಿಜೆಪಿಯವರು ಪ್ರಜಾಪ್ರಭುತ್ವದ ವಿರೋಧಿ ನಡೆ ಅನುಸರಿಸುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಇದೆಲ್ಲ ನಡೆಯಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular