Friday, April 11, 2025
Google search engine

Homeರಾಜ್ಯಉತ್ತರ ಪ್ರದೇಶದಲ್ಲಿ ನಮ್ಮ ಪೊಲೀಸರು ತಪ್ಪು ಮಾಡಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ

ಉತ್ತರ ಪ್ರದೇಶದಲ್ಲಿ ನಮ್ಮ ಪೊಲೀಸರು ತಪ್ಪು ಮಾಡಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ


ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಮ್ಮ ಕರ್ನಾಟಕ ಪೊಲೀಸರು ತಪ್ಪು ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಕರ್ನಾಟಕ ಪೊಲೀಸರು ಪೇಚಿಗೆ ಸಿಲುಕಿದ ವಿಚಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ. ಆದರೆ ನಮ್ಮ ಪೊಲೀಸರು ತಪ್ಪೇನು ಮಾಡಿಲ್ಲ ಅವರು ಮಫ್ತಿಯಲ್ಲಿ ಪೊಲೀಸ್ ಹೋಗಿದ್ದು, ಅಲ್ಲಿಯ ಪೊಲೀಸ್ ಗೆ ತಿಳಿಸಬೇಕಿತ್ತು. ಆದರೆ ತಿಳಿಸದೇ ಹೋಗಿದ್ದಾರೆ. ಅಲ್ಲಿನ ಪೊಲೀಸ್ ಮೊದಲು ನೋಟಿಸ್ ಕೊಡಿ, ನಂತರ ನೋಡೋಣ ಎಂದು ತಿಳಿಸಿದ್ದಾರೆ.

ಅಜಿತ್ ಭಾರತಿ ಎಂಬ ಯುಟ್ಯೂಬರನ್ನು ಅರೆಸ್ಟ್ ಮಾಡಲು ಹೋಗಿದ್ದರು. ನೋಟಿಸ್ ಕೊಟ್ಟ ಮೇಲೆ ಆ ಯೂಟ್ಯೂಬರ್ ಬಾರದೇ ಹೋದರೆ ವಾರೆಂಟ್ ತೆಗೆದುಕೊಂಡು ಬಂಧಿಸ್ತಾರೆ. ಕೆಲವೊಮ್ಮೆ ಈ ರೀತಿಯ ಗೊಂದಲ ಆಗುತ್ತದೆ. ನಮ್ಮ ಪೊಲೀಸರೇನು ತಪ್ಪು ಮಾಡಿಲ್ಲ ಎಂದು ಅವರು ಸಮರ್ಥನೆ ಮಾಡಿಕೊಂಡರು.

RELATED ARTICLES
- Advertisment -
Google search engine

Most Popular