Tuesday, April 22, 2025
Google search engine

Homeರಾಜ್ಯಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣದ ಕಳಪೆ ಕಾಮಗಾರಿ, ಅವ್ಯವಹಾರ: ಸಿಐಡಿ ತನಿಖೆಗೆ ಸಿಎಂ ಆದೇಶ

ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣದ ಕಳಪೆ ಕಾಮಗಾರಿ, ಅವ್ಯವಹಾರ: ಸಿಐಡಿ ತನಿಖೆಗೆ ಸಿಎಂ ಆದೇಶ

ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಫೆ.2ರಂದು ಸಚಿವವೆ ಲಕ್ಷ್ಮಿ‌ ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

RELATED ARTICLES
- Advertisment -
Google search engine

Most Popular