ಪಿರಿಯಾಪಟ್ಟಣ: ನೆಲ ಜಲ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ 2023 – 24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ.21 ರ ಶನಿವಾರ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಹರೀಶ್ ತಿಳಿಸಿದ್ದಾರೆ.
ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ ಸಹಯೋಗದೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ನೆಲ ಜಲ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.21 ರ ಬೆಳಿಗ್ಗೆ 11 ಗಂಟೆಗೆ ಪಿರಿಯಾಪಟ್ಟಣದ ಎಪಿಎಂಸಿ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಎಚ್.ಜಿ ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಈ ವೇಳೆ ಸಂಪನ್ಮೂಲ ವ್ಯಕ್ತಿಗಳು ನೆಲ ಜಲ ಸಂರಕ್ಷಣೆ ಕುರಿತು ಮಾಹಿತಿ ನೀಡಲಿದ್ದು ಸಹಕಾರ ಸಂಘದ ಸರ್ವ ಸದಸ್ಯರು ಸಭೆಗೆ ಆಗಮಿಸಿ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.