Friday, April 18, 2025
Google search engine

Homeಅಪರಾಧಕಾನೂನುಮೈಸೂರು ದಸರಾ ಆನೆ ಮುಂದೆ ಪೋಟೋ, ರೀಲ್ಸ್‌ಗೆ ಬ್ರೇಕ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್

ಮೈಸೂರು ದಸರಾ ಆನೆ ಮುಂದೆ ಪೋಟೋ, ರೀಲ್ಸ್‌ಗೆ ಬ್ರೇಕ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್

ಬೆಂಗಳೂರು: ಮೈಸೂರು ದಸರಾ ಆನೆಗಳು ಕಾಡಿನಿಂದ ನಾಡಿಗೆ ಬಂದು, ಅರಮನೆಯಲ್ಲಿ ದಸರಾ ಮಹೋತ್ಸವ ಸಿದ್ಧತೆಯಲ್ಲಿ ಪಾಲ್ಗೊಳ್ಳಲು ಬೀಡು ಬಿಟ್ಟಿದ್ದಾವೆ. ಈ ಆನೆ ಮುಂದೆ ಅನೇಕ ಪ್ರವಾಸಿಗರು, ಅಧಿಕಾರಿಗಳು ಪೋಟೋ ತೆಗೆದುಕೊಳ್ಳುವುದು, ರೀಲ್ಸ್ ಮಾಡುವುದು ಕಂಡು ಬಂದಿತ್ತು. ಇದರಿಂದ ಆನೆಗಳು ಬೆದರಿ, ಅದರಿಂದ ಅನಾಹುತವಾಗುವ ಸಂಭವ ಇರುವುದರಿಂದ ರಾಜ್ಯ ಸರ್ಕಾರ ಮೈಸೂರು ದರಸಾ ಆನೆಗಳ ಮುಂದೆ ಪೋಟೋ, ರೀಲ್ಸ್ ಮಾಡುವುದನ್ನು ನಿಷೇಧಿಸಿ ಆದೇಶಿಸಿದೆ.

ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ ಎಂದಿದ್ದಾರೆ.

ಕೆಲವರು ಆನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದ ಆನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್ ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ / ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ, ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಈ ಮೂಲಕ ದಸರಾ ಆನೆಗಳ ಮುಂದೆ ರೀಲ್ಸ್, ಪೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ.

RELATED ARTICLES
- Advertisment -
Google search engine

Most Popular