ಶಿವಮೊಗ್ಗ: ಕ್ಯಾನ್ಸರ್ ಪೀಡಿತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸಂಕಲ್ಪದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಮಹತ್ವದ ಯೋಜನೆ ಕೈಗೊಂಡಿದ್ದಾರೆ. ಶಿಕ್ಷಣ ಸಚಿವರಾಗಿ ಎರಡು ವರ್ಷ ಪೂರೈಸಿದ ಸವಿನೆನಪಿಗಾಗಿ, ಅವರು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಸಮೀಪದಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಸತಿ ಶಾಲೆ ಆರಂಭಿಸಲು ನಿರ್ಧರಿಸಿದ್ದಾರೆ.
ಈ ಯೋಜನೆಗಾಗಿ ಖಾಸಗಿ ಎನ್ಜಿಓ ಜೊತೆ Already ಸಹಭಾಗಿತ್ವ ಮಾಡಿಕೊಂಡಿದ್ದು, ಜುಲೈ ಅಂತ್ಯದೊಳಗೆ ಶಾಲೆ ಪ್ರಾರಂಭಿಸುವ ಉದ್ದೇಶವಿದೆ. 1,500 ಮಕ್ಕಳನ್ನು ಗುರುತಿಸಲಾಗಿದ್ದು, 1ನೇ ತರಗತಿಯಿಂದ 10ನೇ ತರಗತಿಯವರೆಗೆ ಶಿಕ್ಷಣ ನೀಡಲಾಗುವುದು.
ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯ ಸಂಬಂಧಿತ ಸೇವೆಗಳು, ಮಿನಿ ಬಸ್, ಆಟದ ಸ್ಥಳ, ಪಾಠದ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುವುದು. “ಕ್ಯಾನ್ಸರ್ ಪೀಡಿತರೂ ಗೌರವಯುತ ಬದುಕು ನಡೆಸಬೇಕು” ಎಂಬುದು ನನ್ನ ಆಶಯ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಲೆಯ ವಿಸ್ತರಣೆ ಕುರಿತು ಕ್ರಮ ಜರುಗಿಸಲಾಗುವುದು.