Friday, June 13, 2025
Google search engine

Homeರಾಜಕೀಯಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: “ಪ್ರಧಾನಿ ನರೇಂದ್ರ ಮೋದಿ ಆಡಳಿತದಿಂದ ದೇಶದ ಬಡತನ ಕಡಿಮೆಯಾಗಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗರೀಬಿ ಹಟಾವೋ ಸೇರಿದಂತೆ ಹಿಂದಿನ ಸರ್ಕಾರಗಳ ಸಾಮಾಜಿಕ ಯೋಜನೆಗಳ ಫಲವಾಗಿ ಬಡತನ ಕಡಿಮೆಯಾಗಿದ್ದು, ಮೋದಿ ಸರ್ಕಾರದ ಪಾತ್ರ ಇಲ್ಲ ಎಂಬ ಮಾತು ಅವರು ಹೇಳಿದ್ದಾರೆ.

ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮದಲ್ಲಿರುವ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ಬಡತನ ಅವರಿಂದ ಹೋಗಲಿಲ್ಲ. ಅವರು ಬಡವರಿಗಾಗಿ ಏನು ಮಾಡಿದ್ದಾರೆ? ಯಾವ ಯೋಜನೆಗಳನ್ನು ತಂದಿದ್ದಾರೆ? ಬಡತನ ಕಡಿಮೆಯಾಗಿರುವುದಾದರೆ ಅದು ಹಿಂದಿನ ಸರ್ಕಾರಗಳ ಯೋಜನೆಗಳ ಫಲ,” ಎಂದು ಹೇರಳವಾಗಿ ಟೀಕಿಸಿದರು.

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು.

ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ. ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು. ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED ARTICLES
- Advertisment -
Google search engine

Most Popular