ಮೂಡುಬಿದಿರೆ: ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.
ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (೧೮) ಮೃತಪಟ್ಟ ಯುವಕ.
ಶಾರಿಕ್ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.