Saturday, November 8, 2025
Google search engine

Homeರಾಜ್ಯಸುದ್ದಿಜಾಲರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ-ಬೆಳಗಾವಿ ಎಸ್.ಪಿ ಭೀಮಾ ಶಂಕರ್ ಗುಳೇದ್

ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ-ಬೆಳಗಾವಿ ಎಸ್.ಪಿ ಭೀಮಾ ಶಂಕರ್ ಗುಳೇದ್

ವರದಿ :ಸ್ಟೀಫನ್ ಜೇಮ್ಸ್.

ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ. : ಪ್ರತಿಟನ್ ಕಬ್ಬಿಗೆ 3500 ರೂ. ನಿಗದಿ
ಮಾಡುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರಿ ದಿದ್ದು ಈ ನಡುವೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕು ಹತ್ತರಗಿ ಬಳಿ ರೈತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಬೆಳಗಾವಿ ಎಸ್.ಪಿ ಭೀಮಾ ಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನ ಗೊಂಡಿರುವ ಹತ್ತರಗಿ ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಬೆಳಗಾವಿ ಎಸ್.ಪಿ ಭೀಮಾ ಶಂಕರ್ ಗುಳೇದ್ ಮಾತನಾಡಿ, ಪ್ರತಿಭಟನೆ ವೇಳೆ ಕೆಲವು ವಾಹನಗಳ ಮೇಲೆ ಕಲ್ಲು ತೂರಿ ದ್ದಾರೆ. ಹತ್ತರಗಿ ಕ್ರಾಸ್‌ನಲ್ಲಿ ಕಲ್ಲು ತೂರಾಟದಿಂದ ಕೆಲವು ಸಿಬ್ಬಂದಿಗೆ ಗಾಯವಾಗಿದೆ. ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಮುಂದಾದಾಗ ಕೆಲವು ಕಿಡಗೇಡಿಗಳು ಕಲ್ಲು ತೂರಿದ್ದಾರೆ ಎಂದರು. ಪ್ರತಿಭಟನಾ ರೈತರ ಮೇಲೆ ನಮ್ಮ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ ಕಲ್ಲು ತೂರಾಟ ಪ್ರಕರಣ ಸಂಬಂಧ ಯಾವುದೇ ಕೇಸ್ ದಾಖ ಲಾಗಿಲ್ಲ ಎಂದು ಎಸ್.ಪಿ.ಭೀಮಾಶಂಕರ್ ಗುಳೇದ್ ತಿಳಿಸಿದರು.

RELATED ARTICLES
- Advertisment -
Google search engine

Most Popular