Sunday, January 4, 2026
Google search engine

Homeರಾಜಕೀಯರಾಜಕೀಯ ಮಾಡಬೇಕು ಆದರೆ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ : ಯು.ಟಿ ಖಾದರ್

ರಾಜಕೀಯ ಮಾಡಬೇಕು ಆದರೆ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ : ಯು.ಟಿ ಖಾದರ್

ಮಂಗಳೂರು : ಎಲ್ಲರೂ ರಾಜಕೀಯ ಮಾಡಬೇಕು. ಆದರೆ ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ, ಪರಸ್ಪರ ಏಕವಚನ ಬಳಕೆ ಕೂಡ ಸಮರ್ಥನೀಯವಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ನಗರದಲ್ಲಿ ಆಯುಷ್‌ ಹಬ್ಬ 2025-26 ಸಾಲಿನ ಕಾರ್ಯಕ್ರಮಕ್ಕೆ ಕರ್ಟನರೈಸರ್‌ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಳ್ಳಾರಿಯಲ್ಲಿ ಬ್ಯಾನರ್‌ ವಿಚಾರಕ್ಕೆ ಗಲಾಟೆಯಾಗಿರುವುದು ಸರಿಯಲ್ಲ ಎಂದು ಹೇಳಿದರು.

ಬಳ್ಳಾರಿಯಲ್ಲಿ ಇಬ್ಬರೂ ಶಾಸಕರಾಗಿದ್ದಾರೆ. ರಾಜಕಾರಣ ಮಾಡಬೇಕು. ಆದರೆ ಸಿನಿಮಾ ರೀತಿಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಇಂತಹ ಘಟನೆಗಳು ಜನ ಪ್ರತಿನಿಧಿಗಳ ಮೇಲಿನ ಗೌರವವನ್ನು ಕಡಿಮೆ ಮಾಡುತ್ತವೆ. ಕೆಲವರ ನಡವಳಿಕೆಯಿಂದ ಎಲ್ಲಾ ರಾಜಕಾರಣಿಗಳಿಗೂ ಕಪ್ಪು ಚುಕ್ಕೆ ಬರುತ್ತದೆ ಎಂದು ಎಚ್ಚರಿಸಿದರು.

ಇನ್ನೂ ಯುವ ಶಾಸಕರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಕಾಂಗ್ರೆಸ್‌‍ ಶಾಸಕ ಭರತ್‌ ರೆಡ್ಡಿ ಅವರ ನಡವಡಕೆಯ ಕುರಿತು ಎಚ್ಚರಿಕೆ ನೀಡಿದ ಸಭಾಧ್ಯಕ್ಷರು, ಸಮಾಜದ ನೆಮ್ಮದಿ ಕಾಪಾಡುವ ಸಲುವಾಗಿ ಜನರು ನಮನ್ನು ಚುನಾಯಿಸಿ ಕಳುಹಿಸಿದ್ದಾರೆ. ನಾವೇ ಮುಂದೆ ನಿಂತು ಗಲಾಟೆ ಮಾಡಿಸಿದರೆ, ಅದು ಸಮರ್ಥನೀಯವಲ್ಲ ಎಂದು ಹೇಳಿದರು.

ಅಲ್ಲದೇ ರಾಜಕಾರಣಿಗಳಿಗೆ ಹಿಂದಿನ ದಿನಗಳಲ್ಲಿ ಒಳ್ಳೆಯ ಹೆಸರಿತ್ತು. ಆ ಸಂಸ್ಕೃತಿಯನ್ನು ನಾವು ಮರಳಿ ಪಾಲಿಸಬೇಕಿದೆ. ಬಳ್ಳಾರಿ ಘಟನೆಗೆ ಹೊಣೆ ಮಾಡಿ ಬಳ್ಳಾರಿಯ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿಯನ್ನು ಅಮಾನತ್ತು ಮಾಡಲು ಸರ್ಕಾರಕ್ಕೆ ತನ್ನದೇ ಆದ ಕಾರಣ ಇರಬಹುದು. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ರೇಸ್‌‍ನಲ್ಲಿ ಸದ್ಯಕ್ಕೆ ನಾನಿಲ್ಲ. ಇನ್ನೂ 20 ವರ್ಷ ಕಾಲಾವಕಾಶವಿದೆ. ಜನರು ಮತ್ತೆ ನನ್ನನ್ನು ಗೆಲ್ಲಿಸಿ ಶಾಸಕನನ್ನಾಗಿ ಮಾಡಲಿ. ಅನಂತರ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಪರಿಶೀಲಿಸಬಹುದು ಎಂದರು.

RELATED ARTICLES
- Advertisment -
Google search engine

Most Popular