ಮಂಡ್ಯ: ೬೬/೧೧ ಕೆ.ವಿ ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರ ಮತ್ತು ೬೬/೧೧ ಕೆ.ವಿ ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರ ಗಳಲ್ಲಿ ಇಂದು ಫೆ. ೧೦ ಸಂಜೆ ೬.೦೦ ಗಂಟೆಯ ವರೆಗೆ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ಹೊರಡುವ ಫೀಡರ್ಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದು.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆಗಳು, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂಗ್ರಾಮಾಂತರ ಪ್ರದೇಶಗಳಾದ ಶ್ರೀನಿವಾಸಪುರ ಗೇಟ್, ಹೊಡಾಘಟ್ಟ, ಕೀಲಾರ, ಹನಕೆರೆ, ಬೂದನೂರು, ಭೂತನ ಹೊಸೂರು, ಈಚಗೆರೆ, ಚನ್ನಪ್ಪನ ದೊಡ್ಡಿ, ಬೇಲೂರು, ಹಂಬರಹಳ್ಳಿ, ಆಲಕೆರೆ, ಕಚ್ಚಿಗೆರೆ, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.