Monday, April 21, 2025
Google search engine

Homeರಾಜ್ಯಸುದ್ದಿಜಾಲಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ, ಎಸ್‌ಐಟಿ ರಚನೆ : ಗೃಹ ಸಚಿವ ಡಾ. ಜಿ ಪರಮೇಶ್ವರ್

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ, ಎಸ್‌ಐಟಿ ರಚನೆ : ಗೃಹ ಸಚಿವ ಡಾ. ಜಿ ಪರಮೇಶ್ವರ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇಂದು ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ ಎಂದರು.

ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದು ಹೇಳಿದರು. ಯಾವುದೇ ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗಲಿದೆ. ಪ್ರಜ್ವಲ್ ರೇವಣ್ಣಗೆ ನೋಟಿಸ್ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular