ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ತಮಿಳುನಾಡಿಗೆ ನೀರನ್ನ ಹರಿಸುವುದನ್ನ ರಾಜ್ಯ ಸರ್ಕಾರ ನಿಲ್ಲಿಸುವುದಿಲ್ಲ. ಆದ್ದರಿಂದ ಮಳೆ ಬಂದು ಜಲಾಶಯ ತುಂಬಲಿ ಎಂದು ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಮಂಡ್ಯದ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ ಪ್ರತಿಮೆಗೆ ಕನ್ನಡಸೇನೆ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವರುಣನ ಕೃಪೆಯಿಂದ ಜಲಾಶಯ ತುಂಬಲಿ ಎಂದು ಪ್ರಾರ್ಥಿಸಿ, ಕಾವೇರಿ ಮಾತೆಗೆ ದೀರ್ಘದಂಡ ನಮಸ್ಕಾರ ಮಾಡಿದ್ದಾರೆ.
ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ರದ್ದಾಗಲಿ ಎಂದು ಇದೇ ಸಂದರ್ಭದಲ್ಲಿ ಘೋಷಣೆ ಕೂಗಿದ್ದಾರೆ.