Sunday, April 20, 2025
Google search engine

Homeಅಪರಾಧಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕೊಳ್ಳೇಗಾಲ: ಬೈಕ್ ಸವಾರನಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೇ. 8ರ ಬುಧವಾರ ತಾಲೂಕಿನ ಸಿಂಗನಲ್ಲೂರು ಗ್ರಾಮದ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.

ಸಿಂಗನಲ್ಲೂರು ಗ್ರಾಮದ ವಾಸಿ ಶ್ರೀಧರ್ (50) ಮೃತ ದುರ್ದೈವಿ. ಹನೂರಿನಲ್ಲಿ ಬಾಳೆಹಣ್ಣು ಅಂಗಡಿ ವ್ಯಾಪಾರ ಮಾಡುತ್ತಿದ್ದನು.

ಈತ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಬರುವಾಗ ಮ.ಬೆಟ್ಟ ಕಡೆಯಿಂದ ಹಿಂಬದಿಯಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಈ ಘಟನೆ ನಡೆದಿದೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರೀಕ್ಷಿಸಿ ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ತಂದು ವೈದ್ಯರಿಂದ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ವಾರಸುದಾರರಿಗೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular