ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರಾಜಿಯಾಗದೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ಒದಗಿಸಿ ಎಂದು ಡಾ.ಕುಮಾರ ಅವರು ಹೇಳಿದರು.
ಇಂದು (ಜು.11) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಕೋಶಾಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಮೂರು ತಿಂಗಳ ಕುಡಿಯುವ ನೀರಿನ ಮಾದರಿಯ ವರದಿಯನ್ನು ಅವಲೋಕಿಸಿ ಸಮಸ್ಯೆ ಇರುವ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಸರಿಪಡಿಸಿ ಎಂದರು.
ನಗರ ಪ್ರದೇಶದ ವಸತಿ ರಹಿತ ಪಟ್ಟಿಯನ್ನು ಸಿದ್ಧ ಪಡಿಸಿ ಆನ್ ಲೈನ್ ತಂತ್ರಾAಶಗಳಿಗೆ ಆಪ್ ಲೋಡ್ ಮಾಡಿ. ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಒಟ್ಟು 974 ಮನೆಗಳು ಪೂರ್ಣಗೊಂಡಿದೆ. 156 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಕಳೆದ ಒಂದು ತಿಂಗಳಿನಿAದ 7 ಮನೆಗಳ ಕಾಮಗಾರಿ ಪೂರ್ಣಗೊಂಡಿದೆ. ವಸತಿ ಸಂಬAಧಿಸಿದ ಯೋಜನೆಗಳ ಕಾಮಗಾರಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಹೇಳಿದರು.
15 ನೇ ಹಣಕಾಸು ಆಯೋಗದಲ್ಲಿ ಯಾವುದೇ ಕಾಮಗಾರಿಯ ಟೆಂಡರ್ ಗಳನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರವಾಗಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಿ. ಟೆಂಡರ್ ಗಳನ್ನು ವಿಳಂಬ ಮಾಡಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರ ತ್ಯಾಜ್ಯ ನಿರ್ವಹಣೆಯನ್ನು ಸೂಕ್ತ ಸಮಯಕ್ಕೆ ವಿಲೇವಾರಿ ಮಾಡಿ. ಆಸ್ತಿ ತೆರಿಗೆ ವಸೂಲಾತಿಯನ್ನು ಕಳೆದ ಸಭೆಗೆ ಹೋಲಿಸಿದರೆ ಒಟ್ಟು ಶೇ.5 ತೆರಿಗೆ ವಸೂಲಾತಿ ಮಾಡಿ ಪ್ರಗತಿ ಸಾಧಿಸಲಾಗಿದೆ. ಪ್ರಗತಿಯನ್ನು ಇನ್ನೂ ಹೆಚ್ಚುಗೊಳಿಸಿ. ನೀರಿನ ಶುಲ್ಕವನ್ನು ವಸೂಲಾತಿ ಶೇಕಡಾವಾರು ಕಡಿಮೆ ಇದ್ದು ನೀರಿನ ಶುಲ್ಕವನ್ನೂ ಪಾವತಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 9 ಇಂದಿರಾ ಕ್ಯಾಂಟಿನ್ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮವ ಹಾಗೂ ಶುದ್ಧ ಅಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಇಂದಿರಾ ಕ್ಯಾಂಟಿನ್ ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಶೀಲನೆ ನಡೆಸಿ ಎಂದು ಸೂಚಿಸಿದರು.
ಸಭೆಯಲ್ಲಿ ತಿಳಿಸಿರುವ ಕೆಲಸಕಾರ್ಯಗಳು ಮುಂದಿನ ಸಭೆ ನಡೆಯುವಷ್ಟರಲ್ಲಿ ಪ್ರಗತಿಯಾಗಿರಬೇಕು. ಅಧಿಕಾರಿಗಳು ವಿಶೇಷ ಕಾಳಜಿ ಮತ್ತು ಮುತುವರ್ಜಿ ವಹಿಸಿ ತಮ್ಮ ಕಾರ್ಯ ದಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕು. ಕೆಲಸಗಳಲ್ಲಿ ನಿರ್ಲಕ್ಷ್ಯ ತೊರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹ ಮೂರ್ತಿ, ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ನಗರಸಭೆಯ ಪರಿಸರ ಅಭಿಯಂತರ ರುದ್ರೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.