ಬೆಂಗಳೂರು: ‘ಸಂಜು ವೆಡ್ಸ್ ಗೀತಾ-2’ ಚಿತ್ರದ ನಾಯಕಿ ರಚಿತಾ ರಾಮ್ ಸಿನಿಮಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸದೇ ಚಿತ್ರತಂಡದ ಅಸಮಾಧಾನಕ್ಕೆ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲಂ ಚೇಂಬರ್)ಗೆ ಅಧಿಕೃತವಾಗಿ ದೂರು ಸಲ್ಲಿಸಿದೆ. ರಚಿತಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚಿತ್ರತಂಡ ಒತ್ತಾಯಿಸಿದೆ.
ನಟ ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಅಭಿನಯದ ಈ ಸಿನಿಮಾ ಇತ್ತೀಚೆಗೆ ಮರು ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ. ಆದರೆ ಪ್ರಚಾರ ಕಾರ್ಯಕ್ರಮಗಳಲ್ಲಿ ನಾಯಕಿ ಭಾಗವಹಿಸದಿರುವುದು ನಿರ್ದೇಶಕ ನಾಗಶೇಖರ್ ಹಾಗೂ ನಿರ್ಮಾಪಕರಿಗೆ ಅಚ್ಚರಿಯೆಂಬಷ್ಟರ ಮಟ್ಟಿಗೆ ದುಃಖ ತಂದಿದೆ.
“ಕೋಟ್ಯಂತರ ಹಣ ಹೂಡಿಕೆ ಮಾಡಿಕೊಂಡು ಕಲಾವಿದರಿಗೆ ಗೌರವ ನೀಡಿ ಎಲ್ಲ ವ್ಯವಸ್ಥೆ ಮಾಡಿದ ಮೇಲೆ, ಅವರು ಪ್ರಚಾರ ಸಮಯದಲ್ಲಿ ಸಹಕಾರ ನೀಡಬೇಕಿದೆ,” ಎಂದು ನಿರ್ದೇಶಕ ನಾಗಶೇಖರ್ ಹೇಳಿದ್ದಾರೆ.
ನಿರ್ಮಾಪಕ ಛಲವಾದಿ ಕುಮಾರ್ ಅವರ ಪ್ರಕಾರ, ಹಲವಾರು ಬಾರಿ ರಚಿತಾ ರಾಮ್ ಅಥವಾ ಅವರ ಮ್ಯಾನೇಜರ್ಗೆ ಸಂಪರ್ಕ ಸಾಧಿಸುವ ಪ್ರಯತ್ನಗಳು ವಿಫಲವಾದವು. ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ಲೈನ್ ವೆಂಕಟೇಶ್ಗೂ ವಿಷಯ ತಿಳಿಸಲಾಗಿದೆ. ಈಗ ರಚಿತಾ ರಾಮ್ ವಿರುದ್ಧ ಕ್ರಮಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.