Sunday, April 20, 2025
Google search engine

Homeರಾಜ್ಯರಾಹುಲ್ ಗಾಂಧಿ ಉತ್ತರಪ್ರದೇಶಕ್ಕೆ ಅಪಮಾನ ಮಾಡುತ್ತಿದ್ದಾರೆ: ಸಿಎಂ ಯೋಗಿ ಆದಿತ್ಯಾನಾಥ್ ಆಕ್ರೋಶ

ರಾಹುಲ್ ಗಾಂಧಿ ಉತ್ತರಪ್ರದೇಶಕ್ಕೆ ಅಪಮಾನ ಮಾಡುತ್ತಿದ್ದಾರೆ: ಸಿಎಂ ಯೋಗಿ ಆದಿತ್ಯಾನಾಥ್ ಆಕ್ರೋಶ

ದೆಹಲಿ: ರಾಹುಲ್ ಗಾಂಧಿ ಸುಳ್ಳು ಮತ್ತು ತಪ್ಪಾದ ಮಾಹಿತಿ ಹರಡುವ ಮೂಲಕ ಉತ್ತರಪ್ರದೇಶಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯಾನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನರಿಂದ ಭೂಮಿ ಕಸಿದಿದ್ದು, ಅದಕ್ಕೆ ಪರಿಹಾರ ನೀಡಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಕಿಡಿ ಕಾರಿದ ಅವರು, ಸದನದಲ್ಲಿ ರಾಹುಲ್ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು. ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ನಿರಾಶ್ರಿತರಾದ ಜನರಿಗೆ ಪರಿಹಾರವಾಗಿ ೧,೭೩೩ ಕೋಟಿ ರೂಪಾಯಿ ನೀಡಲಾಗಿದೆ. ರಾಹುಲ್ ಗಾಂಧಿ ತಮ್ಮ ಖಂಡನೀಯ ಹೇಳಿಕೆಗೆ ಜಗತ್ತಿನಾದ್ಯಂತ ಹರಡಿರುವ ಕೋಟ್ಯಂತರ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ತಿಳಿಸಿದರು.

ರಾಹುಲ್ ಗಾಂಧಿ ಮತ್ತು ಅವರ ಸಹಚರರು ಅಯೋಧ್ಯೆ ಜನರನ್ನು ಗಡಿಪಾರು ಮಾಡಿದ್ದು ಮಾತ್ರವಲ್ಲದೆ ಸರಯೂ ನದಿಯನ್ನು ರಕ್ತದಲ್ಲಿ ಮುಳುಗಿಸಿದ್ದರು. ಇಂದು, ಅಯೋಧ್ಯೆ ತನ್ನ ವೈಭವವನ್ನು ಮರುಸ್ಥಾಪಿಸುತ್ತಿರುವಾಗ ಮತ್ತು ಇಡೀ ಜಗತ್ತನ್ನು ಆಕರ್ಷಿಸುತ್ತಿರುವಾಗ, ಕಾಂಗ್ರೆಸ್ ಅದನ್ನು ಹೇಗೆ ಒಳ್ಳೆಯದು ಎಂದು ಪರಿಗಣಿಸುತ್ತದೆ ಕಾಂಗ್ರೆಸ್ ಸುಳ್ಳಿನ ಕಂತೆ. ನಿಜ ಹೇಳಬೇಕೆಂದರೆ ೧೭೩೩ ಕೋಟಿ ರೂ. ಅಯೋಧ್ಯೆಯ ಜನರಿಗೆ ಪರಿಹಾರವಾಗಿ ನೀಡಲಾಗಿದೆ ಎಂದು ಹೇಳಿದರು.

ರಾಮಪಥ, ಭಕ್ತಿಪಥ, ಜನ್ಮಭೂಮಿ ಪಥ ಅಥವಾ ವಿಮಾನ ನಿಲ್ದಾಣವೇ ಆಗಿರಲಿ, ಯಾರ ಜಮೀನು, ಅಂಗಡಿಗಳು ಮತ್ತು ಮನೆಗಳು ಭಾಗಿಯಾಗಿವೆಯೋ ಅವರಿಗೆ ಪರಿಹಾರ ನೀಡಲಾಗಿದೆ. ಹಿಂಬದಿಯಲ್ಲಿ ಅಂಗಡಿ ಕಟ್ಟಲು ಜಾಗ ಇದ್ದವರಿಗೆ ಅಂಗಡಿಗಳನ್ನು ನಿರ್ಮಿಸಿಕೊಟ್ಟಿದೇವೆ. ನಿವೇಶನ ಇಲ್ಲದವರಿಗೆ ಮಳಿಗೆ ನೀಡುವ ಕೆಲಸವನ್ನು ಬಹುಹಂತದ ಕಾಂಪ್ಲೆಕ್ಸ್ ನಿರ್ಮಿಸಿ ಕೊಡಲಾಗುತ್ತದೆ ಎಂದರು.

RELATED ARTICLES
- Advertisment -
Google search engine

Most Popular