ರಾಯಚೂರು: ಅತಿವೇಗದ ಪರಿಣಾಮ ಟರ್ನಿಂಗ್ ನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಸಲೀಂ ( 34 ) ತಂದೆ ಬಾಬು ಮಿಯಾ ಸಾವನ್ನಪ್ಪಿದ್ದಾರೆ.
ಸಿಂಧನೂರಿನಿಂದ ರಾಯಚೂರಿಗೆ ಬರುವಾಗ ಅಪಘಾತ ಸಂಭವಿಸಿದೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.