Friday, April 11, 2025
Google search engine

Homeರಾಜ್ಯಸುದ್ದಿಜಾಲಮಳೆ ಅವಾಂತರ: ಕೆರೆ ಕೋಡಿ ಹೊಡೆದು ಜಮೀನುಗಳಿಗೆ ನುಗ್ಗಿದ ನೀರು

ಮಳೆ ಅವಾಂತರ: ಕೆರೆ ಕೋಡಿ ಹೊಡೆದು ಜಮೀನುಗಳಿಗೆ ನುಗ್ಗಿದ ನೀರು

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಕೆರೆ ಕೋಡಿ ಒಡೆದು ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಇದರಿಂದಾಗಿ ನೂರಾರು ಎಕರೆ ಜಮೀನು ಜಲಾವೃತವಾಗಿವೆ.

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಅಘಾಲಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ತೆಂಗು, ಅಡಿಕೆ, ಬಾಳೆ, ಜೋಳ ಬೆಳೆ ನಾಶವಾಗಿರೋದು ಕಂಡು ಬಂದಿದೆ. ಈ ಹಿಂದೆ ಕೂಡ ಕೆರೆ ಕೋಡಿ ಒಡೆದು ಅವಾಂತರ ಸೃಷ್ಟಿಯಾಗಿತ್ತು, ತಾತ್ಕಾಲಿಕವಾಗಿ ಅಧಿಕಾರಿಗಳು ಕೆರೆ ದುರಸ್ತಿ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ಮತ್ತೆ ಕೆರೆ ಕೋಡಿ ಒಡೆದು ಮತ್ತಷ್ಟು ಅವಾಂತರಗಳನ್ನು ಸೃಷ್ಟಿಸಿದ್ದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಇಡಿ ಶಾಪ ಹಾಕುತ್ತಿದ್ದಾರೆ.


RELATED ARTICLES
- Advertisment -
Google search engine

Most Popular