ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು. ವಯಸ್ಕ ಮತದಾರರ ಪಟ್ಟಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು ಎಂದು ಜಿ.ಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ಚಿಕ್ಕೋಡಿ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲಿಸಬೇಕು. ದುರಸ್ತಿ ಇದ್ದರೆ, ಅದನ್ನು ಸರಿಪಡಿಸಬೇಕಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಮಾಹಿತಿ ನೀಡಿದರು. ಮತದಾನ ಕೊಠಡಿ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆಯೊಂದಿಗೆ ತರಬೇತಿ ನೀಡಬೇಕು. ಮತದಾರರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಕಾರ್ಯಕ್ರಮಗಳನ್ನು ನಡೆಸಬೇಕು.
ಲೋಕಸಭೆ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಎಲ್ಲ ಅಧಿಕಾರಿಗಳು ತಂಡೋಪತಂಡವಾಗಿ ಕೆಲಸ ಮಾಡಿ ಚುನಾವಣೆ ಯಶಸ್ವಿಗೊಳಿಸಬೇಕು. ಚಿಕ್ಕೋಡಿ ಉಪವಿಭಾಗಾಧಿಕಾರಿ ಮಹೆಬೂಬಿ ತಹಶೀಲ್ದಾರ್ ಸಿ.ಎಸ್.ಕುಲಕರ್ಣಿ, ತಾಪಂ ಇಒ ಜಗದೀಶ ಕಮ್ಮಾರ ಹಾಗೂ ತಾಲೂಕಾ ಮಟ್ಟದ ಎಆರ್ಒಗಳು ಇಒಗಳು ಇತರರು ಇದ್ದರು.