Friday, April 18, 2025
Google search engine

Homeರಾಜ್ಯಸುದ್ದಿಜಾಲರಾಮನಗರ: ಬೆಳ್ಳಂಬೆಳಿಗ್ಗೆ ರೈತನ ಮೇಲೆ ಕಾಡಾನೆ ದಾಳಿ

ರಾಮನಗರ: ಬೆಳ್ಳಂಬೆಳಿಗ್ಗೆ ರೈತನ ಮೇಲೆ ಕಾಡಾನೆ ದಾಳಿ

ರಾಮನಗರ: ತಾಲೂಕಿನ ದೇವರದೊಡ್ಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ದೇವರದೊಡ್ಡಿ ನಿವಾಸಿ ರಾಜು ನಾಯಕ (60) ಕಾಡಾನೆ ದಾಳಿಗೆ ಸಿಲುಕಿದ ರೈತ.

ಜಮೀನಿನ ಬಳಿ ತೆರಳಿದ್ದ ರೈತ ರಾಜುನಾಯಕ ಅವರ ಮೇಲೆ ಆನೆ ಏಕಾಏಕಿ ದಾಳಿ ನಡೆಸಿದೆ. ಗಾಯಗೊಂಡಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಗ್ರಾಮದ ಸಮೀಪವೇ ಬೀಡುಬಿಟ್ಟಿರುವ ಒಂಟಿ ಸಲಗವನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular