Friday, April 18, 2025
Google search engine

Homeಅಪರಾಧಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡ ಜೈಲಿನಿಂದ ಬಿಡುಗಡೆ

ಅತ್ಯಾಚಾರ ಆರೋಪ ಪ್ರಕರಣ: ವಕೀಲ ದೇವರಾಜೇಗೌಡ ಜೈಲಿನಿಂದ ಬಿಡುಗಡೆ

ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಮಂಗಳವಾರ ದೇವರಾಜೇಗೌಡ ರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಜೂನ್.೫ರಂದು ಹಾಸನ ಜಿಲ್ಲಾ ನ್ಯಾಯಾಲಯವು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಆ ಬಳಿಕ ಜಾಮೀನು ನೀಡೋದಕ್ಕೆ ನಿರಾಕರಿಸಿತ್ತು.

ಈ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು, ಜಾಮೀನು ಮಂಜೂರು ಮಾಡಲಾಗಿತ್ತು.

ಇಂದು ಅತ್ಯಾಚಾರ ಆರೋಪ ಕೇಸಲ್ಲಿ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಂತ ವಕೀಲ ದೇವಾರಾಜೇಗೌಡ ಅವರನ್ನು, ಕೋರ್ಟ್ ಜಾಮೀನಿನ ಹಿನ್ನಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular